ಬೆಂಗಳೂರು:- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪಾನಿಪುರಿಗೆ ಬಳಸುವ ರಾಸಾಯನಿಕಗಳ ಬ್ಯಾನ್ ಬಗ್ಗೆ ಸುಳಿವು ನೀಡಿದ್ದಾರೆ.
Vijayanagara: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು.. ಇಬ್ಬರು ಸಾವು.. !
ಪಾನಿಪುರಿ ತಯಾರಿಸಲು ಬಳಸುವ ಕೃತಕ ಬಣ್ಣದಲ್ಲಿ ಸನ್ ಸೆಟ್ ಯೆಲ್ಲೊ, ರೋಡೋಮೈನ್ ಸೇರಿದಂತೆ ಐದು ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಸೋಮವಾರ ಈ ಬಗ್ಗೆ ಅಧಿಕೃತವಾಗಿ ಅವರು ಆದೇಶ ಪ್ರಕಟವಾಗುವ ಸಾಧ್ಯತೆಯಿದೆ
ಗೋಬಿ, ಕಬಾಬ್, ಕಾಟನ್ ಕ್ಯಾಂಡಿ ಬಗ್ಗೆ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಪಾನಿಪೂರಿಗೆ ಬಳಸುವ ಕೆಮಿಕಲ್ ಬ್ಯಾನ್ಗೆ ಆದೇಶ ಮಾಡಲಾಗುತ್ತದೆ. ತಯಾರಕರು ಬ್ಯಾನ್ ಮಾಡಿದ ಮೇಲೂ ಬಳಕೆ ಮಾಡಬಾರದು. ಈ ಬಗ್ಗೆ ಜನರು ಕೂಡ ಎಚ್ಚರಿಕೆವಹಿಸಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಡಿಕೆಶಿಗೆ ಸಿಎಂ ಸ್ಥಾನದ ಬಗ್ಗೆ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ವಿಚಾರವಾಗಿ, ಯಾವ ಕಾರಣಕ್ಕೋ ಅವರು ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲ ಅಪ್ರಸ್ತುತ. ಸಿಎಂ ಅವರು ಇದ್ದಾಗ ಇಥರದ್ದೆಲ್ಲ ಚರ್ಚೆ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಹಾಲಿನ ದರದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ, ಹಾಲಿನ ಪ್ರಮಾಣ ಹೆಚ್ಚಳದಿಂದ ದರ ಹೆಚ್ಚಳ ಮಾಡಿದ್ದೇವೆ. ಹಾಲು ಚೆಲ್ಲುವ ಬದಲು ಜನರಿಗೆ ಕೊಡಲು, ರೈತರಿಗೆ ಅನುಕೂಲ ಆಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಚಾರವನ್ನು ಬಿಜೆಪಿಯವರು ತಿಳಿದುಕೊಳ್ಳಬೇಕು ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)