ತುಮಕೂರು:- ಆಜಾನ್ ಸದ್ದು ಕೇಳಿಸುತ್ತಿದ್ದಂತೆ ಗೃಹ ಸಚಿವ ಪರಮೇಶ್ವರ್ ಅವರು ಮಾತು ನಿಲ್ಲಿಸಿದ್ದಾರೆ.
ತುಮಕೂರಿನ ಚಿಲುಮೆ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿತ್ತು. ಸ್ವತ್ತು ಕಳವು ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಸ್ವತ್ತುಗಳ ಪ್ರದರ್ಶನ ಹಾಗೂ ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ನಡೆಯುತ್ತಿತ್ತು.
![Demo](https://ainlivenews.com/wp-content/uploads/2023/12/spoorthi-1.jpg)
ಕಾರ್ಯಕ್ರಮದ ಬಳಿಕ ಸಚಿವ ಡಾ.ಜಿ.ಪರಮೇಶ್ವರ್ ನಡೆಸುತ್ತಿದ್ದರು. ಈ ವೇಳೆ ಆಜಾನ್ ಸದ್ದು ಕೇಳಿಸಿದೆ. ಆಜಾನ್ ಸದ್ದು ಕೇಳುತ್ತಿದ್ದಂತೆ ಪರಮೇಶ್ವರ ಅವರು ಸೈಲೆಂಟ್ ಆಗಿದ್ದಾರೆ. ಸುಮಾರು ಎರಡು ನಿಮಿಷಕ್ಕೂ ಹೆಚ್ಚು ಕಾಲ ಮಾತು ನಿಲ್ಲಿಸಿ ಪರಮೇಶ್ವರ್ ಸುಮ್ಮನೇ ಕುಳಿತರು.
ಆಜಾನ್ ಬಳಿಕ ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)