ಬೆಂಗಳೂರು:- ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮತ್ತು ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ವಿಚಾರಣಾಧೀನ ಕೈದಿ ನಾಗರಾಜ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ನಾಗರಾಜ್ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಮಂಡ್ಯದಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದಾರೆ.
ಉದ್ಯಮಿಯಿಂದ ಹಣ ವಸೂಲಿ ಆರೋಪ… ನೂತನ ಸಂಸದ ಪಪ್ಪು ಯಾದವ್ ವಿರುದ್ಧ ಸುಲಿಗೆ ಕೇಸ್ ದಾಖಲು!
ಹೇಳಿದ ಕೆಲಸ ಮಾಡದಿದ್ದರೆ ಸಜಾ ಕೈದಿಗಳು ವಿಚಾರಣಾ ಕೈದಿಗಳು ಮೇಲೆ ಇಲ್ಲ-ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಜೈಲು ಸಿಬ್ಬಂದಿಗೆ ಸುಳ್ಳು ಹೇಳಿ, ವಿಚಾರಣಾ ಕೈದಿಗೆ ಹಲ್ಲೆ ಮಾಡುವಂತೆ ಹಲ್ಲೆ ಮಾಡುತ್ತಾರೆ. ಸಜಾ ಕೈದಿಗಳ ಮಾತನ್ನು ನ.ಬಿ 15 ಜನ ಜೈಲು ಸಿಬ್ಬಂದಿ ನಾಗರಾಜ್ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಲ್ಲದೆ ಹಲ್ಲೆ ಬಳಿಕ ಕೊಡಿಸದೆ ದರ್ಪ ಮೆರೆದಿದ್ದಾರೆ. ಜೈಲಿನಲ್ಲಿನ ಸೀನಿಯರ್ ಕೈದಿಗಳ ವಿರುದ್ಧವೂ ದೌರ್ಜನ್ಯ, ಹಲ್ಲೆ ಆರೋಪವಿದೆ. ಕೈದಿ ನಟರಾಜ್ ಎಂಬುವನು ನಾಗರಾಜ ಮೇಲ್ಲೆ ಹಲ್ಲೆ ಮಾಡಿರುವ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಹೊರಿಸಲಾಗಿದೆ. ಈ ಹಲ್ಲೆಗಳ ಕುರಿತು ನಾಗರಾಜ್ ವಿಡಿಯೋ ಹೇಳಕೆ ನೀಡಿ, ತಾಯಿಗೆ ವಾಟ್ಸಪ್ ಮೂಲಕ ಕಳುಹಿಸಿದ್ದಾರೆ.