ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಶಾಲೆಗೆ ಸೇರಿದ 8 ದಿನಕ್ಕೆ ಶಿಕ್ಷಕಿಯೊಬ್ಬಳು ಬಾಲಕಿಗೆ ನರಕ ತೋರಿಸಿದ್ದಾಳೆ. ವೆಂಕಟೇಶ್ವರ ಪುರದ ಅನ್ವರ್ ಲೇಔಟ್ನ ಖಾಸಗಿ ಶಾಲೆಯಲ್ಲಿ ನರ್ಸರಿ ಓದುತ್ತಿದ್ದ 3 ವರ್ಷದ ಪುಟ್ಟ ಕಂದಮ್ಮನ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
Gud News: ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ಅಳವಡಿಕೆಗೆ ದಿನಾಂಕ ವಿಸ್ತರಣೆ!
ಸ್ಕೂಲಿಗೆ ಹೋಗುವುದಿಲ್ಲ ಎಂದು ಹಠ ಮಾಡುತ್ತಿದ್ದ 3 ವರ್ಷದ ಬಾಲಕಿ ಹೊಟ್ಟೆನೋವು ಎಂದು ಯಾತನೆ ಪಡುತ್ತಿದ್ದಳು. ಜತೆಗೆ ಮೂತ್ರ ವಿಸರ್ಜನೆ ಮಾಡುವ ಜಾಗದಲ್ಲಿ ನೋವಾಗುತ್ತಿದೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಳು. ಇದರಿಂದ ಗಾಬರಿಯಾದ ಮಗುವಿನ ತಾಯಿ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು, ಸರ್ಕಾರಿ ಆಸ್ಪತ್ರೆಗೆ ಹೋಗಲು ಸೂಚಿಸಿದ್ದರು. ಹೀಗಾಗಿ ಅಲ್ಲಿಂದ ನೇರವಾಗಿ ವಾಣಿವಿಲಾಸ್ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿದ್ದರು.
ಆದರೆ ಹೀಗೆ ಹೋದ ಪೋಷಕರಿಗೆ ಶಾಕ್ ಕಾದಿತ್ತು. ಯಾಕೆಂದರೆ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಲೈಂಗಿಕ ದೌರ್ಜನ್ಯ ಆಗಿರುವ ಬಗ್ಗೆ ದೃಢಪಡಿಸಿದ್ದರು. ದೇಹದ ಖಾಸಗಿ ಅಂಗಗಳಲ್ಲಿ ಗಾಯವಾಗಿ ರಕ್ತಸ್ರಾವವಾಗಿತ್ತು. ನೋವಿನಿಂದ ನರಕಯಾತನೆ ಪಡುತ್ತಿರುವ ನಡೆಯಲು ಆಗದೆ ಕಷ್ಟ ಪಡುತ್ತಿತ್ತು.