ಚಿತ್ರದುರ್ಗ: ಪ್ರೀತಿಸಿ ಮದುವೆಯಾದ ಯುವ ಪ್ರೇಮಿಗಳಿಗೆ ಪೋಷಕರೇ ವಿಲನ್ ಆಗಿ ಯುವತಿಯನ್ನು ಬೇರ್ಪಡಿಸಿ ಬಲವಂತವಾಗಿ ಮನೆಗೆ ಕರೆದುಕೊಂಡು ಹೋದ ಘಟನೆ ಮೊಳಕಾಲ್ಮೂರಿನ ಬಿಜಿ ಕೆರೆ ಗ್ರಾಮದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ವೈರಲ್ ಆಗಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೋಸನಸಾಗರದ ಕುರುಬ ಸಮುದಾಯದ ಪದ್ಮಜಾ ಹಾಗೂ ಬಿಜಿಕೆರೆಯ ನಾಯಕ ಸಮುದಾಯದ ಪ್ರವೀಣ್,
ಇಬ್ಬರು ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಪದ್ಮಜಾ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಇಬ್ಬರು ರಿಜಿಸ್ಟರ್ ಮ್ಯಾರೇಜ್ ಗೆ ರೆಡಿಯಾಗಿ ಹೋಗುತ್ತಿದ್ದ ವೇಳೆ ಯುವತಿಯ ಪೋಷಕರು ದಾರಿಯಲ್ಲಿ ಅಡ್ಡ ಹಾಕಿ ಬಲವಂತದಿಂದ ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಘಟನೆಯ ಬಳಿಕ ಪ್ರವೀಣ್ ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲಿಸಿ ಇಬ್ಬರಿಗೂ ನ್ಯಾಯಕೊಡಿಸಿ ಎಂದು ಮನವಿ ಮಾಡಿದ್ದಾರೆ.
ಬೇಸಿಗೆಯಲ್ಲಿ ತರಕಾರಿಗಳು ಹಾಳಾಗದಂತೆ ಕಾಪಾಡಿಕೊಳ್ಳುವುದು ಹೇಗೆ ಗೊತ್ತಾ..?
ಇತ್ತ ಪ್ರವೀಣ್ ಗೆ ಯುವತಿಯ ಸಹೋದರ ಶ್ರೀನಿವಾಸ್ ಬೆದರಿಕೆ ಕರೆ ಮಾಡಿದ್ದಾನೆ. ಜೊತೆಗೆ ತಂಗಿಗೆ ವಿಷ ಹಾಕಿ ಸಾಯಿಸುತ್ತೇವೆ, ನಿನಗೆ ಕೊಡಲ್ಲ ಎಂದು ವಾಟ್ಸಪ್ ಮೆಸೇಜ್ ಮಾಡಿದ್ದಾನೆ. ನಿನ್ನನ್ನು ಕೂಡ ಲಾರಿ ಹತ್ತಿಸಿ ಸಾಯಿಸುತ್ತೇವೆ ಎಂದು ಮೆಸೇಜ್ ಮಾಡಿದ್ದು, ಇದರಿಂದ ಪ್ರವೀಣ್ ಆತಂಕಗೊಂಡಿದ್ದಾನೆ.