ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ನಾಲ್ಕು ನಿಗಮದ ಬಸ್ ಗಳಲ್ಲಿ ಪ್ರಯಾಣಿಸುವವರಿಗೆ ಇನ್ನು ಮುಂದೆ ಲಗ್ಗೇಜ್ ಗಳಲ್ಲಿ ಕೆಲವು ವಸ್ತುಗಳನ್ನು ಕೊಂಡುಯುವಂತಿಲ್ಲ. ನೀತಿ ಸಂಹಿತೆ ಜಾರಿಯಾಗಿದ್ದು ,ಎಲ್ಲಾ ಕಡೆಯಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಇದರ ಬೆನ್ನೆಲೆ ರಾಜ್ಯ ಸಾರಿಗೆ ಬಸ್ ಗಳಲ್ಲಿ ಲಗೇಜ್ ಸಾಗಿಸಲು ಪ್ರಯಾಣಿಕರಿಗೆ ಕೆಲವು ಕಟ್ಟಪಣೆ ಹಾಕಲಾಗಿದೆ.
DVS PC: ‘ಸಹಿಸಿಕೊಳ್ಳೋರಿಗೆ ತಾಳ್ಮೆಯಿದ್ರೆ, ದುಃಖ ಕೊಟ್ಟವರು ಇದ್ದೂ ಸತ್ತಂತೆ’: DV ಸದಾನಂದಗೌಡ ಹೇಳಿದ್ಯಾಕೆ?
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ತಯಾರಿ ನಡೆಯುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಮತದಾರರನ್ನು ಸೆಳೆಯಲು ಸರ್ಕಸ್ ಶುರು ಮಾಡಿದ್ದಾರೆ. ಇದರ ನಡುವೆ 4 ನಿಗಮಗಳಿಗೆ ಹೊಸ ನಿಯಮ ಜಾರಿಯಾಗಿದೆ. ಸೂಕ್ತ ದಾಖಲೆ ಅಥವಾ ನೀತಿ ಸಂಹಿತೆಗೆ ಧಕ್ಕೆ ಬರುವ ವಸ್ತುಗಳ ಸಾಗಟ ಮಾಡುವಂತಿಲ್ಲ. ಈ ಬಗ್ಗೆ ಚಾಲಕ ಹಾಗೂ ನಿರ್ವಾಹಕರಿಗೆ ನಿಗಮದ ಭದ್ರತಾ ಮತ್ತು ಜಾಗೃತ ವಿಭಾಗದ ಹಿರಿಯ ಅಧಿಕಾರಿಗಳು ಸೂಚನೆ ಕೊಟ್ಟಿದ್ದು, ಪ್ರಯಾಣಿಕರು ಯಾವುದೇ ದಾಖಲೆ ಇಲ್ಲದ ಬೆಲೆಬಾಳುವ ವಸ್ತುಗಳನ್ನು ಬಸ್ನಲ್ಲಿ ತೆಗೆದುಕೊಂಡು ಹೋಗುವಂತಿಲ್ಲ.
BIGG BREAKING: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ಗುಡ್ ಬೈ!
ಪ್ರಯಾಣಿಕರ … ಲಗೇಜ್ ಸಾಗಿಸುವಾಗ ಲಗೇಜ್ ಹಾಕುವ ವ್ಯಕ್ತಿ ಹಾಗೂ ಲಗೇಜ್ ಸ್ವೀಕರಿಸುವ ವ್ಯಕ್ತಿಗಳ ವಿವರಗಳನ್ನು ಬಸ್ಸಿನ ಸಿಬ್ಬಂದಿ ಪಡೆಯಬೇಕು. ಲಗೇಜ್ ಗಳನ್ನು ಪರಿಶೀಲಿಸಿ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ನಿಷೇಧಿತ ವಸ್ತುಗಳನ್ನು ಹಾಗೂ ಹಣ ಚಿನ್ನ ಬೆಳ್ಳಿ ಇತ್ಯಾದಿಗಳನ್ನು ಸಾಗಿಸುವಂತಿಲ್ಲ ಇದರ ಹೊರತಾಗಿ ಪ್ರಯಾಣಿಕರ ಲಗೇಜ್ ಗಳಲ್ಲಿ ಅನುಮಾನಾಸ್ಪದವಾಗಿ ಕಂಡು ಬರುವ ವಸ್ತುಗಳನ್ನು ಚುನಾವಣಾ ನೀತಿ ಸಂಹಿತೆ ಸಂಬಂಧ ಬಂದಿ ಪರಿಶೀಲನೆ ಮಾಡಬೇಕು. ಒಂದು ವೇಳೆ ಪ್ರಯಾಣಿಕರು ತಕರಾರು ಮಾಡಿದ್ದಲ್ಲಿ ಲಗ್ಗೇಜ್ ಗಳನ್ನು ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸಬೇಕು ಎಂದು ಸೂಚಿಸಲಾಗಿದೆ.