ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ.
Hubballi: ಆಂಬುಲೆನ್ಸ್ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ!
ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಅನುಕುಮಾರ್ ಜಾಮೀನು ಅರ್ಜಿ ತೀರ್ಪು ಆ.31ಕ್ಕೆ ಹಾಗೂ ಸೆ.2ರಂದು ವಿನಯ್ ಹಾಗೂ ಕೇಶವಮೂರ್ತಿ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ನಾಲ್ವರು ನ್ಯಾಯಾಲಯಕ್ಕೆ ಪ್ರತ್ಯೇಕ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಮಧ್ಯಾಹ್ನ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದ ಸರ್ಕಾರಿ ಪರ ವಕೀಲ ಪ್ರಸನ್ನ ಕುಮಾರ್, ಹತ್ಯೆ ಸಂಚಿನಲ್ಲಿ ಪವಿತ್ರಾ ಗೌಡ ಅವರ ನೇರ ಪಾತ್ರವಿದೆ. ಚಿತ್ರದುರ್ಗದಿಂದ ಮೃತನನ್ನು ಅಪಹರಿಸಿ ಪಟ್ಟಣಗೆರೆ ಶೆಡ್ ಕರೆತಂದಿದ್ದರು. ಇತರೆ ಆರೋಪಿಗಳೊಂದಿಗೆ ಪವಿತ್ರಾ ತೆರಳಿ ಮೃತನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದರು. ಇವರ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಗುರುತು ಪತ್ತೆಯಾಗಿದೆ. ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ. ಮಹಿಳೆ ಎಂಬ ಕಾರಣಕ್ಕಾಗಿ ಜಾಮೀನು ನೀಡಕೂಡದು ಎಂದು ಮನವಿ ಮಾಡಿದರು.