ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸಲು ಪೊಲೀಸರು ಪವಿತ್ರಾ ಗೌಡ ಹಾಗೂ ನಟ ದರ್ಶನ್ ಅವರನ್ನು ಸಹ ಕರೆತರಲಾಗಿತ್ತು.
ಪೊಲೀಸರ ಮುಂದೆ ನಟ ದರ್ಶನ್ ಕೈ ಕಟ್ಟಿ ನಿಂತಿದ್ರು. ಇತ್ತ ಪವಿತ್ರಾ ಗೌಡ ಕೂಡ ಭಯದಲ್ಲೇ ಕಣ್ಣೀರು ಹಾಕಿದ್ದಾರೆ ಎನ್ನಲಾಗ್ತಿದೆ. ಕೊಲೆಯಾದ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದ ಸ್ಥಳ, ದಿಕ್ಕು ಹಾಗೂ ಹಲ್ಲೆ ಬಳಿಕ ಆತ ಸಾವನ್ನಪ್ಪಿದ ಸ್ಥಿತಿ ಎಲ್ಲದರ ಬಗ್ಗೆ ಮಾಹಿತಿ ಪಡೆದಿದ್ದಾರೆ. ಘಟನೆಯನ್ನ ಮರುಸೃಷ್ಟಿ ಮಾಡಿದ್ದ ಪೊಲೀಸರು, ಬಳಿಕ ಅದನ್ನು ವೀಡಿಯೋ ಕೂಡ ಮಾಡಿಕೊಂಡಿದ್ದಾರೆ. ಸ್ಥಳ ಮಹಜರು ಮುಗಿದ ಬಳಿಕ ಪೊಲೀಸರು ಮತ್ತೆ ಠಾಣೆಗೆ ಆರೋಪಿಗಳನ್ನು ಕರೆದೊಯ್ದಿದ್ದಾರೆ.
ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ ಅವರ ಗ್ಯಾಂಗ್ನ 13 ಮಂದಿಯ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ವಾಟ್ಸಾಪ್ ಹಿಸ್ಟರಿಯನ್ನು ಪೊಲೀಸರು ಓಪನ್ ಮಾಡಿದ್ದಾರೆ. ಮೃತ ರೇಣುಕಾಸ್ವಾಮಿ ಹಾಗೂ ಪವಿತ್ರಾಗೌಡ ಪರಿಚಯದ ಬಗ್ಗೆ ತನಿಖಾಧಿಕಾರಿಗಳಿಂದ ಪ್ರಶ್ನೆ ಮಾಡುತ್ತಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗಳು ಪವಿತ್ರಾ ಗೌಡಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಪವಿತ್ರಾ ಗೌಡ ಮೊಬೈಲ್ ಸೀಜ್ ಮಾಡಿಕೊಂಡು ವಾಟ್ಸ್ ಆ್ಯಪ್ ಚಾಟ್ ಹಿಸ್ಟರಿಯ ಸ್ಕ್ರೀನ್ ಶಾಟ್ ಹಿಡಿದು ಪೊಲೀಸರು ಪ್ರಶ್ನೆ ಮಾಡುತ್ತಿದ್ದಾರೆ. ರೇಣುಕಾ ಸ್ವಾಮಿ ಪರಿಚಯ ಹೇಗಾಯ್ತು? ನಿಮಗೆ ಆತ ಏನೆಂದು ಮೆಸೇಜ್ ಮಾಡಿದ್ದ. ಇಷ್ಟೆಲ್ಲಾ ಆದ್ರೂ ದೂರು ಯಾಕೆ ನೀಡಲಿಲ್ಲ ಎನ್ನುವ ಪ್ರಶ್ನೆಯನ್ನು ಪೊಲೀಸರು ಕೇಳ್ತಿದ್ದಾರಂತೆ. ನಟಿ ಪವಿತ್ರಾ ಮಾತ್ರ ನನಗೇನು ಗೊತ್ತಿಲ್ಲ ಎಂದು ಬಾಯ್ಬಿಡುತ್ತಿಲ್ಲ ಎನ್ನಲಾಗ್ತಿದೆ.
ಈ ಬಗ್ಗೆ ತನಿಖೆ ನಡೆಸುತ್ತಿರೋ ಪೊಲೀಸರು, ಮಹತ್ವದ ಸಾಕ್ಷ ಕಲೆ ಹಾಕುತ್ತಿದ್ದಾರೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿ, ಬರ್ಬರವಾಗಿ ಹತ್ಯೆ ಮಾಡಿ, ಮೃತ ದೇಹ ಎಸೆಯಲಾಗಿತ್ತು. ವಿಚಾರಣೆ ವೇಳೆ ಮೃತ ದೇಹ ಎಸೆಯೋದಕ್ಕೆ 30 ಲಕ್ಷ ರೂಪಾಯಿ ಡೀಲ್ ನಡೆಸಿರೋ ಮಾಹಿತಿಯೂ ಲಭ್ಯವಾಗಿದೆ.