ವಿಜಯಪುರ:- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಕ್ರಾಸ್ ಮಾಡಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಕ್ರಾಸ್ ಮಾಡುವುದಿಲ್ಲ. ರಾಜ್ಯದಲ್ಲಿ ಅವರದೇ ಸರ್ಕಾರ ಇದೆ. ಆದರೂ ಒಂದಿಬ್ಬರು ಆಯ್ಕೆಯಾಗಬಹುದು ಅಷ್ಟೇ. ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಎಂದರು.

ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಸಂಪೂರ್ಣ ಕಡಿಮೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಧೃಡಸಂಕಲ್ಪ ಮಾಡಬೇಕು. ಇದು ಕೇವಲ ಒಬ್ಬರಿಂದ ಆಗುವ ಕೆಲಸವಲ್ಲ, ಇದೊಂದು ಸಾಮೂಹಿಕ ಪ್ರಯತ್ನ. ಎಲ್ಲ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ದುಡಿಯಬೇಕು. ರಾಜ್ಯದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು.
ಹಾಲಿ ಸಂಸದ ರಮೇಶ ಜಿಗಜಿಣಗಿ ಅವರು ಸಹ ಹಿರಿಯ ರಾಜಕೀಯ ಧುರೀಣರು, ಲಕ್ಷಾಂತರ ಕಾರ್ಯಕರ್ತರ ಪ್ರೀತಿಯನ್ನು ಸಂಪಾದಿಸಿದ್ದಾರೆ ಎಂದರು.

