ಬೆಂಗಳೂರು:- ಎಡಬಿಡಂಗಿಗಳ ಅಧಿಕಪ್ರಸಂಗಿತನ ನೋಡಿ ಜನತೆ ಬೇಸತ್ತಿದ್ದಾರೆ ಎಂದು ಹೇಳುವ ಮೂಲಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಸಂಬಂಧ X ಮಾಡಿರುವ ಅವರು, ಸ್ವಾಮಿ ಸಿದ್ದರಾಮಯ್ಯ ಅವರೇ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಅಣಬೆಗಳಂತೆ ತೆಲೆ ಎತ್ತುವ ಎಡಬಿಡಂಗಿ ಬುದ್ದಿಜೀವಿಗಳ ಅಧಿಕಪ್ರಸಂಗಿತನ ನೋಡಿ ನೋಡಿ ಕನ್ನಡಿಗರಿಗೆ ಸಾಕಾಗಿದೆ.
ಈಗ ಇನ್ನೊಂದು ಅನಾವಶ್ಯಕ ಚರ್ಚೆ ಹುಟ್ಟುಕಾಕುವ ಮೂಲಕ ತಾವು ಮತ್ತೊಬ್ಬ ಬುದ್ಧಿಜೀವಿ ಆಗಲು ಪ್ರಯತ್ನ ಪಡಬೇಡಿ. ಬುದ್ಧ, ಬಸವ, ಅಂಬೇಡ್ಕರರ ಹೆಸರು ಹೇಳಿಕೊಂಡು ರಾಜಕೀಯ ಮಾಡಿ ಅಧಿಕಾರ ಅನುಭವಿಸುವುದು ದೊಡ್ಡದಲ್ಲ. ಅಧಿಕಾರವಿದ್ದಾಗ ಆ ಮಹನೀಯರ ಹಾದಿಯಲ್ಲಿ ನಡೆದು ಪ್ರಾಮಾಣಿಕವಾಗಿ ಜನಸೇವೆ ಮಾಡುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವ. ವಾಲ್ಮೀಕಿಯ ರಾಮನ ಬಗ್ಗೆ ಚರ್ಚೆ ಆಗುವುದಕ್ಕಿಂತ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ, ಅದರಿಂದ ವಾಲ್ಮೀಕಿ ಸಮಾಜಕ್ಕೆ ಆಗಿರುವ ಅನ್ಯಾಯದ ಬಗ್ಗೆ ಚರ್ಚೆ ಆಗುವುದು ಉತ್ತಮ. ಅಲ್ಲವೇ ಮಹದೇವಪ್ಪನವರೇ? ಎಂದು ಪ್ರಶ್ನಿಸಿದರು.