ಬೆಂಗಳೂರು:- ಕುಮಾರಸ್ವಾಮಿ ನೋಡಿ ಜನ ನಕ್ತಿದ್ದಾರೆ ಎಂದು DCM ಡಿಕೆಶಿ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ.
![Demo](https://ainlivenews.com/wp-content/uploads/2023/12/spoorthi-1.jpg)
ಜನ ನಿಮ್ಮನ್ನು ನೋಡಿ ನಗುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು.
ಕುಮಾರಸ್ವಾಮಿಯವರ ನೀಲಿ ಚಿತ್ರದ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ಮಾಜಿ ಮುಖ್ಯಮಂತ್ರಿಯ ಮಾತಿಗೆ ತೂಕ, ಗೌರವ ಇರಬೇಕು. ನಾನು ಕ್ಷೇತ್ರಕ್ಕೆ ಹೋಗದಿದ್ದರು ನನ್ನನ್ನು 1,23,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಕನಕಪುರ ಕ್ಷೇತ್ರದ ಜನತೆ ನನ್ನ ಮೇಲೆ ಅಷ್ಟೊಂದು ನಂಬಿಕೆ ಇಟ್ಟಿದ್ದಾರೆ ಎಂದು ತಿಳಿಸಿದರು.
ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ. ಅವರ ಹತಾಶೆ ಅವರನ್ನು ಈ ರೀತಿಯಾಗಿ ಮಾತನಾಡಿಸುತ್ತಿದೆ. ಅವರೇ ಹೋಗಿ ಕನಕಪುರದ ಜನರನ್ನು ಮಾತನಾಡಿಸಲಿ. ಡಿ ಕೆ ಶಿವಕುಮಾರ್ ಹೀಗೆ ಮಾಡಿದ್ದರೇ? ಎಂದು ನಿಮ್ಮ ಕಾರ್ಯಕರ್ತರನ್ನೇ ಕೇಳಿ. ನಾನು ಈ ರೀತಿಯ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದೆ ಎಂದು ನಮ್ಮ ಕ್ಷೇತ್ರದ ಜನರು ಹಾಗೂ ನಿಮ್ಮ ಕಾರ್ಯಕರ್ತರು ಹೇಳಿದರೆ, ಈ ಕೂಡಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಆಗ ನೀವೇನು ಮಾಡುತ್ತೀರಾ? ಎಂದು ಪ್ರಶ್ನಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)