ಪಾಲಕ್ಕಾಡ್: ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (LDF) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ರಾಜ್ಯದ ಸ್ಥಿತಿಯನ್ನು ಹದಗೆಡಿಸುತ್ತಿವೆ. ಕೇರಳದ (Kerala) ಜನರು ಎಲ್ಡಿಎಫ್ ಮತ್ತು ಯುಡಿಎಫ್ ಎರಡರ ಬಗ್ಗೆ ಎಚ್ಚರದಿಂದಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಾಲಕ್ಕಾಡ್ನಲ್ಲಿ (Palakkad) ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇರಳ ಅಥವಾ ಪಶ್ಚಿಮ ಬಂಗಾಳದಲ್ಲಿ ಎಲ್ಲಾ ಎಡ ಸರ್ಕಾರಗಳು ಒಂದೇ ಆಗಿದ್ದು, ಅವರು ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಾರೆ ಎಂದು ಆರೋಪಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಕೇರಳ ಮತ್ತು ಇಡೀ ಪ್ರದೇಶದ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪ್ರಯತ್ನಗಳಿಗೆ ವಿರೋಧ ಪಕ್ಷಗಳು ಅಡ್ಡಿಪಡಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಕೇಂದ್ರ ಸರ್ಕಾರ ರಾಜ್ಯಕ್ಕೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳದಿಂದ ಕೇರಳದವರೆಗೆ ಎಲ್ಲಾ ಎಡಪಂಥೀಯ ಸರ್ಕಾರಗಳ ಸ್ವಭಾವ ಸಾಮಾನ್ಯವಾಗಿದೆ. ಅವರಿಗೆ ಯಾವ ಎಡವಿಲ್ಲ ಮತ್ತು ಯಾವ ಬಲವಿಲ್ಲ. ಕೇರಳದಲ್ಲಿ ಕಾಂಗ್ರೆಸ್ ಎಡ ಪಕ್ಷದ ಜನರನ್ನು ‘ಭಯೋತ್ಪಾದಕರು’ ಎಂದು ಕರೆಯುತ್ತದೆ. ಆದರೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಈ ‘ಭಯೋತ್ಪಾದಕರು’ ಒಟ್ಟಿಗೆ ಕುಳಿತು ಒಟ್ಟಿಗೆ ತಿನ್ನುತ್ತಾರೆ ಮತ್ತು ಚುನಾವಣೆಗೆ ತಂತ್ರಗಳನ್ನು ಮಾಡುತ್ತಾರೆ. ಇಂತಹ ಜನರ ಬಗ್ಗೆ ಎಚ್ಚರಿಕೆ ಇರಲಿ ಎಂದು ಹರಿಹಾಯ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)