ಬೆಂಗಳೂರು: ಸರ್ಕಾರ ಒಂದು ವರ್ಷ ಹೇಗೆ ಕೆಲಸ ಮಾಡಿತು ಅಂತ ಜನ ಹೇಳ್ತಾರೆ, ನಾಯಕರಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಒಂದು ವರ್ಷ ಸರ್ಕಾರ ಐಸಿಯುನಲ್ಲಿತ್ತು ಎಂಬ ಹೆಚ್.ಡಿ ಕುಮಾರಸ್ವಾಮಿ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಏನಾಯ್ತು ಅಂತ ಜನ ಹೇಳಬೇಕು, ನಾಯಕರು ಹೇಳೋದಲ್ಲ. ಹೆಣ್ಣು ಮಕ್ಕಳ ಬದುಕಿನಲ್ಲಿ ಬದಲಾವಣೆ ಯಾವ ಮಟ್ಟಕ್ಕೆ ಆಗಿದೆ ಅಂತ ತಾಯಂದಿರು ಹೇಳಬೇಕು ಎಂದಿದ್ದಾರೆ.
ಗಮನಿಸಿ.. ಹೊಸ `APL-BPL’ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!
ಚುನಾವಣೆಗೂ ಮುನ್ನ ಕುಮಾರಸ್ವಾಮಿಯವರೇ ನುಡಿಮುತ್ತು ಹೇಳಿದ್ರಲ್ಲ. ಅವರ ನುಡಿ ಮುತ್ತುಗಳು ನಿಮ್ಮ ಹತ್ತಿರ ದಾಖಲೆ ಇದೆಯಲ್ಲ. ನಮ್ಮ ಬಗ್ಗೆ ಅವರು ಹೇಳಲೇಬೇಕು, ನಾವು ನಮ್ಮ ಬಗ್ಗೆ ಶಭಾಷ್ ಗಿರಿ ಕೊಡಿ ಅಂತ ಕೇಳಕ್ಕಾಗಲ್ಲ, ಕೇಳೋದೂ ಇಲ್ಲ. ಪಾಪ ಅವ್ರು ಇನ್ನೇನು ಮಾಡ್ತಾರೆ..? ಅವ್ರ ಕೈಯಲ್ಲಂತು ಏನೂ ಮಾಡೋಕೆ ಆಗಿಲ್ಲ. ಸರ್ಕಾರ ICU ನಲ್ಲಿ ಇತ್ತೋ ಅಥವಾ ಏನಾಗಿತ್ತೋ ಅಂತ ಜನ ಹೇಳಬೇಕು ಎಂದು ತಿರುಗೇಟು ನೀಡಿದ್ದಾರೆ.