ಮಂಡ್ಯ: ಐದು ಗ್ಯಾರಂಟಿಗಳು. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳು. ಈ ಯೋಜನೆಗಳನ್ನೇ ಮುಂದೆ ಇಟ್ಟುಕೊಂಡು ಲೋಕಸಮರವನ್ನ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ. ಈ ಮೂಲಕ ಹಳೇ ಮೈಸೂರು ಭಾಗವನ್ನ ಕಜ್ಬ ಮಾಡಲು ಸಕ್ಕರಿನಗರಿ ಮಂಡ್ಯದಿಂದಲೇ ರಣಕಹಳೆ ಹೂದಿದೆ.
ಹೌದು ಲೋಕಸಮರಕ್ಕೆ ಇನ್ನೇನೂ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲಲು ಕೈಪಡೆ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ. ಇದಕ್ಕಾಗಿ ಈಗಿನಿಂದಲೇ ಸಾಕಷ್ಟು ತಯಾರಿ ಕೂಡ ನಡೆಸುತ್ತಿದೆ. ಅದರಲ್ಲೂ ಕೂಡ ಗ್ಯಾರಂಟಿ ಅಸ್ತ್ರಗಳನ್ನೇ ಪ್ರಯೋಗ ಮಾಡಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲಲು ಭರ್ಜರಿ ತಯಾರಿ ಮಾಡುತ್ತಿದ್ದು, ಸಕ್ಕರಿನಗರಿ ಮಂಡ್ಯವನ್ನ ಕಬ್ಜ ಶತಯ-ಗತಾಯ ಪ್ರಯತ್ನ ಪಡೆಯುತ್ತಿದೆ.
ಈ ನಿಟ್ಟಿನಲ್ಲಿ ಇವತ್ತು ಸಕ್ಕರಿನಗರಿ ಮಂಡ್ಯದಲ್ಲಿ ಬೃಹತ್ ಆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶವನ್ನ ಆಯೋಜನೆ ಮಾಡುವ ಮೂಲಕ ಲೋಕ ಅಖಾಡಕ್ಕೆ ಚಾಲನೆ ನೀಡಿದ್ದಾರೆ. ಅಂದಹಾಗೆ ಇವತ್ತು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ರಾಜ್ಯ ಸರ್ಕರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಮಳವಳ್ಳಿಗೆ ಆಗಮಿಸಿದ ಸಿಎಂ ಸಿದ್ದು ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದಲ್ಲಿಕನಕದಾಸರ ಪ್ರತಿಮೆ ಆನಾವರಣ ಮಾಡಿದ್ರು.
Blood Pressure: ಹೈ ಬಿಪಿ ಇರುವವರು ಒಮ್ಮೆ ಈ ಉಪಯುಕ್ತ ಮಾಹಿತಿಯನ್ನು ಓದಲೇಬೇಕು..!
ಗ್ರಾಮಸ್ಥರು ಕೂಡ ಭರ್ಜರಿ ಸ್ವಾಗತಕೋರಿದ್ರು. ಆನಂತರ ನೇರವಾಗಿ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದು ಅಂಡ್ ಟೀಂ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಹಾಗು ಜೆಡಿಎಸ್ ವಿರುದ್ದ ಗುಟುರು ಹಾಕಿದ್ರು. ಇನ್ನು ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಸಚಿವರಾದ ಚಲುವರಾಯಸ್ವಾಮಿ, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ ಸೇರಿದಂತೆ ಮಂಡ್ಯ ಜಿಲ್ಲೆಯ ಎಲ್ಲ ಕಾಂಗ್ರೆಸ್
ಶಾಸಕರು ಪಾಲ್ಗೊಂಡಿದ್ದರು. ಗ್ಯಾರಂಟಿ ಸಮಾವೇಶದ ಹೆಸರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರನ್ನ ಸೇರಿಸಿ ಲೋಕಸಭಾ ಚುನಾವಣೆಗೆ ತಯಾರಿ ಕೂಡ ಆರಂಭಿಸಿದ್ರು. ಜಿಲ್ಲೆಯ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ರು.ಇನ್ನು ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದು, ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಪಾಲಿನ ತೆರಿಗೆ ಬಂದಿಲ್ಲ. ಸುಳ್ಳಿನ ಭರವಸೆಯನ್ನ
ಬಿಜೆಪಿ ನೀಡುತ್ತಿದೆ. ಕೋಮುವಾದಿ ಜೊತೆ ಜೆಡಿಎಸ್ ಕೈಜೋಡಿಸಿದೆ. ಹೀಗಾಗಿ ಅವರಿಗೆ ಬೆಂಬಲ ನೀಡದೇ ಮಂಡ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸುವಂತೆ ಕರೆ ಕೊಟ್ಟರು. ಒಟ್ಟಾರೆ ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿ ಲೋಕಸಮರದಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ.