ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಬರ್ಬರವಾಗಿ ಹತ್ಯೆಗೀಡಾದರು. ಈ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾದರೆ, ದರ್ಶನ್ ಗೆಳತಿ ಪವಿತ್ರಾ ಗೌಡ ಮೊದಲ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿ ಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಇರುವ ದರ್ಶನ್ಗೆ ವಿಜೆ / ಆಂಕರ್ ಹೇಮಲತಾ ಸಪೋರ್ಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
’ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ. ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ’’ ಎಂದು ದರ್ಶನ್ ಕುರಿತಾಗಿ ಬರೆದಿರುವ ವಿಜೆ ಹೇಮಲತಾ, ‘’ದಯವಿಟ್ಟು ರೇಣುಕಾಸ್ವಾಮಿಯನ್ನು ಹೀರೋ ಮಾಡೋದು ನಿಲ್ಲಿಸಿ’’ ಎಂದು ಪೋಸ್ಟ್ ಮಾಡಿದ್ದಾರೆ. ‘’ಕಡೆಗೂ ನನ್ನಿಂದ ತಡೆಯಲಾಗಲಿಲ್ಲ!! ಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಷ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹವೆಂಬ ಸಂಕೋಲೆಯಲ್ಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ..
ʼʼಚೆಂಡು ಹೂʼʼ ಪೂಜೆಗಷ್ಟೇ ಅಲ್ಲ, ನಿಮ್ಮ ಮುಖದ ಸೌಂದರ್ಯಕ್ಕೂ ಉಪಯೋಗ..! ಹೇಗೆ ಗೊತ್ತಾ..?
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ದಯವಿಟ್ಟು ರೇಣುಕಾಸ್ವಾಮಿಯನ್ನ ಹೀರೋ ಮಾಡೋದು ನಿಲ್ಲಿಸಿ. ಯಾವುದೇ ಅರ್ಥವಿಲ್ಲ #ಡಿಬಾಸ್’’ ಎಂದು ಇನ್ಸ್ಟಾಗ್ರಾಮ್ನಲ್ಲಿ ವಿಜೆ ಹೇಮಲತಾ ಬರೆದು ಕೊಂಡಿದ್ದಾರೆ. ಪೋಸ್ಟ್ ಹಾಕಿದ ಬಳಿಕ ಪೋಸ್ಟ್ಗೆ ಕಾಮೆಂಟ್ ಸೆಕ್ಷನ್ನ ವಿಜೆ ಹೇಮಲತಾ ಆಫ್ ಮಾಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)