ಬೆಂಗಳೂರು:- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ನಾನು ಮಂಡ್ಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾವಿಡಿ ಎಂದು ಮಂಡ್ಯ ಜನಗಳಿಗೆ ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ
ಇನ್ನು ಈಗಾಗಲೇ ನನ್ನ ಮೇಲೆ ಮಂಡ್ಯ ಜನರು ವಿಶ್ವಾಸ ಇಟ್ಟಿದ್ದೀರಾ. ಯಾವ ರಾಜಕೀಯ ನಾಯಕರು ಮಂಡ್ಯ ಜಿಲ್ಲೆಯಲ್ಲಿ ನನ್ನಷ್ಟು ಮದುವೆ ಸಮಾರಂಭಗಳಿಗೆ ಹೋಗಿಲ್ಲ. ಹಲವು ಜಿಲ್ಲೆಗಳಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ನನ್ನನ್ನು ಪ್ರಚಾರಕ್ಕೆ ಕರೆಯುತ್ತಿದ್ದಾರೆ. ಸಾಕಷ್ಟು ಕಡೆ ನಾನು ಹೋಗಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.
Bengaluru: ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷವಾದ ಚಿರತೆ – ಜನತೆಗೆ ಟೆನ್ಷನ್, ಟೆನ್ಷನ್!
ಜೆಡಿಎಸ್ ಈಗ ಮುಗಿದೇ ಹೋಯ್ತು ಎಂದು ಕೆಲವರು ಹೇಳುತ್ತಾರೆ. ನಮ್ಮ ಕಾರ್ಯಕರ್ತರು ನಮಗೆ ಯಾರು ಅನ್ಯಾಯ ಮಾಡಿಲ್ಲ. ಎಲ್ಲರಿಗೂ ನಮ್ಮ ಪಕ್ಷದ ಪರ ಒಲವು ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ 4 ಕ್ಷೇತ್ರಗಳನ್ನಾದರೂ ಗೆಲ್ಲುತ್ತಿದ್ದೋ. ನಮ್ಮ ಸ್ವಯಂ ಕೃತ ಅಪಾರಾಧಗಳಿಂದ ಸೋತಿದ್ದೇವೆ. ನನ್ನ ಕನಕಪುರ ಸ್ನೇಹಿತ ನನಗೆ ಅಮೃತ ಹಾಕಿದ್ದೇನೆ ಎಂದು ಹೇಳಿದ್ದಾರೆ. ಅದ್ಯಾವ ಅಮೃತ ಹಾಕಿದ್ದಾನೋ ಗೊತ್ತಿಲ್ಲ. ಇಂದು ಮಂಡ್ಯಗೆ ಬಂದು ಏನ್ ಏನೋ ಹೇಳಿದ್ದಾರೆ. ಏನು ಹೇಳ್ತಾರೋ ಹೇಳಲಿ, ಜನರು ಉತ್ತರ ಕೊಡುತ್ತಾರೆ ಎನ್ನುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಮೇಕೆದಾಟು ಯೋಜನೆ ಏನ್ ಆಯ್ತು. ಕಾಂಗ್ರೆಸ್ನವರು ಈಗ ಬಿಜೆಪಿ ಸಂಸದರ ಕಡೆ ಬೆಟ್ಟು ಮಾಡಿ ತೋರುತ್ತಾರೆ. ದೇವೇಗೌಡರು ಇನ್ನೂ ಸಹ ಬದುಕಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಎರಡು ಮೂರು ಕ್ಷೇತ್ರ ಗೆಲ್ಲಲು ಅಲ್ಲ. ನಮ್ಮ ರಾಜ್ಯಕ್ಕೆ ಆಗಿರುವ ನೀರಾವರಿ ವಿಚಾರದಲ್ಲಿನ ಅನ್ಯಾಯವನ್ನು ಸರಿ ಪಡಿಸಲು. ನೀರಾವರಿ ವಿಚಾರದಲ್ಲಿ ಇನ್ನೂ ಅಭಿವೃದ್ಧಿ ಮಾಡುತ್ತೇವೆ. ಕನಕಪುರದ ನನ್ನ ಸ್ನೇಹಿತ ಜೆಡಿಎಸ್ ಮುಳುಗಿದೆ, ಕೊನೆ ಆಯ್ತು ಎನ್ನುತ್ತಾರೆ. ಜೆಡಿಎಸ್ ಮುಳುಗಿಲ್ಲ, ಈಗ ಎಳುತ್ತಾ ಇದೆ. ಜೆಡಿಎಸ್ನ ತೆನೆ ಹೊತ್ತ ಮಹಿಳೆ, ಹಸಿರಿನಿಂದ ಮೆರೆಯುತ್ತಾರೆ. ಆ ಸ್ನೇಹಿತನಿಗೆ ಜನರೇ ಉತ್ತರ ಕೊಡುತ್ತಾರೆ ಎಂದು ಡಿಕೆಶಿಗೆ ಹೆಚ್ಡಿಕೆ ಟಾಂಗ್ ಕೊಟ್ಟಿದ್ದಾರೆ.