ಹಾಸನ:- ವಿಶ್ವದ ಅಗ್ರಗಣ್ಯ ನಾಯಕನಾಗಿ ಬೆಳೆದಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹಿಂದೆ ಬಿಜೆಪಿ ವಿರುದ್ಧ ಹೋರಾಟ ಮಾಡಿದು ಸತ್ಯ ಆದರೆ ಈಗ ಅದನ್ನೆಲ್ಲ ಮರೆತು ಒಟ್ಟಾಗಿ ಕೆಲಸ ಮಾಡಿ ಲೋಕ ಸಭಾ ಚುನಾವಣೆಯಲ್ಲಿ ಗೆದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಕರೆ ನೀಡಿದರು. ಪ್ರಧಾನಿ ಮೋದಿಯವರು ದೊಡ್ಡ ವ್ಯಕ್ತಿಯಾಗಿ ಬೆಳೆದಿದ್ದಾರೆ, ಕೇವಲ ಭಾರತ ಮಾತ್ರವಲ್ಲ ಇಡೀ ವಿಶ್ವದಲ್ಲೇ ಅಗ್ರಗಣ್ಯ ನಾಯಕನೆಂದು ಗುರುತಿಸಿಕೊಂಡಿದ್ದಾರೆ ಎಂದು ದೇವೇಗೌಡ ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಬಿಎಸ್ ಯಡಿಯೂರಪ್ಪನವರ ಮಗ ಬಿವೈ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಮೇಲೆ ಆರ್ ಅಶೋಕ ಬಂದು ತಮ್ಮೊಂದಿಗೆ ಮಾತಾಡಿದ್ದಾರೆ. ಹಾಗಾಗಿ, ಹಿಂದಿನ ದ್ವೇಷ, ಅಸೂಯೆ ಕೋಪ-ತಾಪ, ಅಸಮಾಧಾನ ಎಲ್ಲವನ್ನು ಮರೆತು ಒಂದಾಗಿ, ಒಟ್ಟಾಗಿ ಹೊರಾಡೋಣ ಎಂದು ಮಾಜಿ ಪ್ರಧಾನಿ ಹೆಚ್ ಜಿ ದೇವೇಗೌಡ ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)