ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿಗೆ ಬೆಂಗಳೂರು ಉತ್ತರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ (Rajeev Gowda) ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಪ್ರಧಾನಿ ನಾಳೆ ರಾಜ್ಯಕ್ಕೆ ಬರ್ತಿದ್ದಾರೆ. ಅವರು ಬರುವ ಮುನ್ನ ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ಅವರು ಉತ್ತರಿಸಬೇಕು. ಬೆಂಗಳೂರಿನಲ್ಲಿ ನೀರನ ಸಮಸ್ಯೆ ದೊಡ್ಡದಿದೆ. ಮೇಕೆದಾಟಿಗೆ ಪ್ರಪೋಸಲ್ ಕೊಟ್ಟಿದ್ದೆವು. ಯಾಕೆ ಎನ್ವಿರಾನ್ಮೆಂಟ್ ಅಪ್ರೂವಲ್ ಕೊಟ್ಟಿಲ್ಲ. ಕೃಷ್ಣ ಟ್ರಿಬ್ಯೂನಲ್ ಆಗಿ 10 ವರ್ಷ ಆಯ್ತು. ಯಾಕೆ ಗೆಜೆಟ್ ಹೊರಡಿಸಿಲ್ಲ? ಅಪ್ಪರ್ ಭದ್ರಾಗೆ 5,300 ಕೋಟಿ ರೂ. ಘೋಷಿಸಿದ್ರು. ಯಾಕೆ ಇಲ್ಲಿಯವರೆಗೆ ಅದರ ಹಣ ಬಿಡುಗಡೆ ಮಾಡಿಲ್ಲ ಎಂದು ರಾಜೀವ್ ಗೌಡ ಕೇಳಿದ್ದಾರೆ. 15 ನೇ ಹಣಕಾಸು ಆಯೋಗದ ರಿಪೋರ್ಟ್ ಏನಿದೆ? ಕರ್ನಾಟಕಕ್ಕೆ 5,400 ಕೋಟಿ ಶಿಫಾರಸು ಮಾಡಿತ್ತು.
ಈ ಖಾಯಿಲೆ ಇರುವವರು ಪೇರಳೆ ಹಣ್ಣು ತಿನ್ನಲೇಬೇಡಿ..! ಅಪಾಯ ಕಟ್ಟಿಟ್ಟಬುತ್ತಿ
ಅದರ ಬಗ್ಗೆ ಯಾಕೆ ಚಕಾರವಿಲ್ಲ. ಇಂಪ್ಲಿಮೆಂಟ್ ಮಾಡ್ತೇವೆ ಅಂದವರು ಯಾಕೆ ಮಾಡಿಲ್ಲ? ಫೈನಾನ್ಸ್ ಕಮಿಷನ್ ರೆಕಮೆಂಡೇಷನ್ ಮಾಡಿತ್ತು. ಯಾಕೆ ಹಣವನ್ನ ನಮಗೆ ಬಿಡುಗಡೆ ಮಾಡಿಲ್ಲ? ಪೆರಿಪೆರಲ್ ರಿಂಗ್ ರಸ್ತೆಗೆ ಹಣ ಯಾಕೆ ಕೊಟ್ಟಿಲ್ಲ. ಪ್ರಧಾನಿ, ಸಬರಬನ್ ರೈಲು ಉದ್ಘಾಟಿಸಿದರು. 40 ತಿಂಗಳಲ್ಲಿ ಯೋಜನೆ ಪೂರ್ಣ ಎಂದಿದ್ರಿ. ಈಗ 20 ತಿಂಗಳಾಯ್ತು, ಎಲ್ಲಿ ಹೋಯ್ತು ಯೋಜನೆ? ಬರ ಪರಿಹಾರದ ಬಗ್ಗೆ ಗಮನವೇ ಕೊಟ್ಟಿಲ್ಲ. 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹೆಚ್ಚಿದೆ. ಗ್ರಾಮೀಣ ಭಾಗದ ಜನ ಸಂಕಷ್ಟದಲ್ಲಿದ್ದಾರೆ. ಇಲ್ಲಿಯವರೆಗೆ ಪರಿಹಾರದ ಹಣ ಕೊಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.