ಬೆಂಗಳೂರು : ಹುಟ್ಟುಹಬ್ಬದ ದಿನ ತರಹೇವಾರಿ ಕೇಕ್ಗಳನ್ನು ಕತ್ತರಿಸಿ ಸಂಭ್ರಮಿಸುವುದು ಸಾಮಾನ್ಯ. ಈ ಸಂಸ್ಕೃತಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಲಾಂಜಲಿ ಇಟ್ಟಿದ್ದಾರೆ.
ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ದಿನ ಕೇಕ್ ಕತ್ತರಿಸುವ ಬದಲು ಕಲ್ಲಂಗಡಿ ಹಣ್ಣನ್ನು ಕತ್ತರಿಸುವ ಮೂಲಕ ಹೊಸ ಟ್ರೆಂಡ್ ಸೆಟ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಕಾಲತಾಣದಲ್ಲಿ ವೈರಲ್ ಆಗಿದೆ.
ನಾಗಾರ್ಜುನ್ ದ್ವಾರಕಾನಾಥ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ‘ಟ್ರೆಂಡ್ ಸೆಟ್.. ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ಕಲ್ಲಂಗಡಿ ಕತ್ತರಿಸುವುದರೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿದರು. ಆಚರಣೆಗಳು ಮತ್ತು ಆರೋಗ್ಯ ಇದರ ಪ್ರಮುಖ ಆದ್ಯತೆ’ ಎಂದು ಬರೆದುಕೊಂಡಿದ್ದಾರೆ.
ಮೇ 30, 2023ರಂದು ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ಅವರನ್ನು ಸರ್ಕಾರ ನೇಮಕ ಮಾಡಲಾಗಿತ್ತು. ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ಬಿ ದಯಾನಂದ್ ಅವರು ಈ ಮೊದಲು ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದರು. ಅವರು 1994ರ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ.