ಚಿಕ್ಕಮಗಳೂರು: ಮೂಡಿಗೆರೆ ಬಸ್ ಸ್ಟ್ಯಾಂಡ್ ಬಳಿ ನೈತಿಕ ಪೊಲೀಸ್ಗಿರಿ ಪ್ರಕರಣ ದಾಖಲಾಗಿದ್ದು ಯುವತಿ ಗೆ ಡೈರಿ ಮಿಲ್ಕ್ ಚಾಕಲೇಟ್ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಕಾರ್ ನಲ್ಲಿ ಬಂದ ಯುವಕರಿಂದ ಹಲ್ಲೆ ಮಾಡಲಾಗಿದ್ದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕರನ್ನ ವಶಕ್ಕೆ ಪಡೆದಿದ್ದಾರೆ. ತಪ್ಪಿಸಿಕೊಂಡ ಯುವಕನಿಗಾಗಿ ಶೋಧ ನಡೆಯುತ್ತಿದೆ.
ಈ ಸಂಬಂಧ ಮೂಡಿಗೆರೆಯಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣ ದಾಖಲಾಗಿದ್ದು ಘಟನೆ ಸಂಬಂಧ ಮೂಡಿಗೆರೆ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್ ದಾಖಲು ನಿನ್ನೆ ಸಂಜೆ ಮೂಡಿಗೆರೆ KSRTC ಬಸ್ ನಿಲ್ದಾಣದಲ್ಲಿ ನಡೆದ ಘಟನೆಐಪಿಸಿ 143, 144, 148, 323, 324, 504, 506, 149ರಡಿ ಪ್ರಕರಣದಾಖಲಾಗಿದೆ.
ಯುವತಿಗೆ ಚಾಕಲೇಟ್ ಕೊಟ್ಟಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಇಬ್ಬರು ಯುವಕರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದ ಗುಂಪು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಪೊಲೀಸರು