ಬೆಂಗಳೂರು: ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಕ್ಸ್ನಲ್ಲಿ ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ ಎಕ್ಸ್ನಲ್ಲಿ ತಿಳಿಸಿದೆ. ಏ.25 ರಂದು ತೇಜಸ್ವಿ ಸೂರ್ಯ ಎಕ್ಸ್ನಲ್ಲಿ ಅಯೋಧ್ಯೆಯ ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವ ವಿಡಿಯೋವನ್ನು ಅಪ್ಲೋಡ್ ಮಾಡಿ,
Our generation was blessed to witness the majestic Surya Tilak on Bhagwan Shri Ram at Ayodhya on Ram Navami.
A wait for almost 500 years & a wish of crores of Bharatiyas was fulfilled by PM Shri @narendramodi Ji.
For Bharatiyata to survive, vote for BJP!#DakshinakkeSurya pic.twitter.com/4B0ti6pT1B
— Tejasvi Surya (ಮೋದಿಯ ಪರಿವಾರ) (@Tejasvi_Surya) April 25, 2024
ರಾಮ ನವಮಿಯಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೇಲೆ ಭವ್ಯವಾದ ಸೂರ್ಯ ತಿಲಕವನ್ನು ವೀಕ್ಷಿಸಲು ನಮ್ಮ ಪೀಳಿಗೆಯು ಆಶೀರ್ವದಿಸಲ್ಪಟ್ಟಿದೆ. ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ ಎಂದು ಬರೆದಿದ್ದರು.