ಬೆಂಗಳೂರು: “ರಾಜ್ಯದಲ್ಲಿ ತಲೆದೋರಿದ್ದ ವಿದ್ಯುತ್ ಕ್ಷಾಮವನ್ನು ನೀಗಿಸಲು ಪಂಜಾಬ್ ಮತ್ತು ಉತ್ತರ ಪ್ರದೇಶದೊಂದಿಗೆ 2023ರ ನವೆಂಬರ್ನಿಂದ 2024 ಮೇವರೆಗೂ ವಿದ್ಯುತ್ ವಿನಿಮಯದ ಒಪ್ಪಂದ ಮಾಡಿಕೊಂಡು ಗ್ರಾಹಕರಿಗೆ ವಿದ್ಯುತ್ ಪೂರೈಸಲಾಗಿತ್ತು. ಈ ಎರಡೂ ರಾಜ್ಯಗಳಿಗೆ ಜೂನ್ 16ರಿಂದ ವಿದ್ಯುತ್ ಹಿಂದಿರುಗಿಸಲಾಗುತ್ತದೆ,” ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಖರೀದಿ ಬದಲಿಗೆ ಪಂಜಾಬ್ ಮತ್ತು ಉತ್ತರ ಪ್ರದೇಶದೊಂದಿಗೆ ವಿನಿಮಯ ಒಪ್ಪಂದ ಮಾಡಿಕೊಂಡು ಇಲಾಖೆ ಬೊಕ್ಕಸಕ್ಕೆ ಹೆಚ್ಚು ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸಿದ್ದೆವು,” ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
“ರಾಜ್ಯದಲ್ಲಿ ಕಳೆದ ಮುಂಗಾರು ಮತ್ತು ಹಿಂಗಾರಿನಲ್ಲಿ ಮಳೆ ಕೊರತೆಯಿಂದ ಆಗಸ್ಟ್ನಲ್ಲೇ ಬೇಸಿಗೆಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ, ಮೊದಲೇ ಮುನ್ನೆಚ್ಚರಿಕೆ ವಹಿಸಿದ್ದರಿಂದ ಬೇಸಿಗೆಯಲ್ಲಿ ಹೆಚ್ಚು ಸಮಸ್ಯೆಯಾಗಲಿಲ್ಲ. ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು.
ಅದಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. 2024ರ ಮಾರ್ಚ್ 12ರಂದು ಅತಿ ಹೆಚ್ಚಿನ ಬೇಡಿಕೆ 17,220 ಮೆಗಾ ವ್ಯಾಟ್ ಇತ್ತು. ಅದೇ ರೀತಿ 2024ರ ಏಪ್ರಿಲ್ 5ರಂದು ಅತಿ ಹೆಚ್ಚು 332 ಮೆಗಾ ಯೂನಿಟ್ ವಿದ್ಯುತ್ ಬಳಕೆಯಾಗಿತ್ತು. ಇದು ಇಂಧನ ಇಲಾಖೆಯಲ್ಲಿ ದಾಖಲೆಯ ವಿದ್ಯುತ್ ಪೂರೈಕೆಯಾಗಿದೆ,” ಎಂದು ಮಾಹಿತಿ ನೀಡಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)