ಬೆಂಗಳೂರು:- ಫ್ಲೈಟ್ ನಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ನನ್ನು ಅರೆಸ್ಟ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪ್ರಜ್ವಲ್ ವಿರುದ್ಧ ಈಗಾಗಲೇ ವಾರೆಂಟ್ ಜಾರಿಯಾಗಿದೆ. ಪ್ರಜ್ವಲ್ ಬಂಧನಕ್ಕೆ ಎಲ್ಲಾ ರೀತಿಯಲ್ಲೂ ಕ್ರಮ ತೆಗೆದುಕೊಳ್ಳಬೇಕು. ವಾರೆಂಟ್ ಜಾರಿಯಾಗಿರುವುದರಿಂದ ಬಂಧನ ಮಾಡಲೇಬೇಕು. ಎಸ್ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಬಂಧಿಸುತ್ತಾರೆ. ನಂತರ ಅವರ ಹೇಳಿಕೆಗಳು ಮತ್ತೊಂದು ಏನು ಪ್ರಕ್ರಿಯೆ ಶುರು ಆಗುತ್ತವೆ ಎಂದರು.
ಲಾಕಪ್ ಡೆತ್ ಕೇಸ್.. ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಮಾಹಿತಿ ಬಯಲು!
ಹಾಸನದಲ್ಲಿ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸುರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತವರನ್ನು ಬಂಧಿಸಲಾಗುತ್ತದೆ. ಈಗಾಗಲೇ 11-12 ಜನರನ್ನ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದು ಬೆಳಕಿಗೆ ಬಂದರೆ, ಅವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದರು.
ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31ಕ್ಕೆ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸ್ ಆಗಲಿದ್ದಾರೆ. ಈಗಾಗಲೇ ಮ್ಯೂನಿಕ್ನಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ. ಮೇ 31ರ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರಲಿದ್ದಾರೆ. ಏರ್ ಪೋರ್ಟ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ.