ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ವಿಚಾರದಲ್ಲಿ ಈಗಾಗಲೇ ಈ ಪ್ರಕರಣವನ್ನ ಎಸ್ ಐಟಿ ಗೆ ವಹಿಸಲಾಗಿದೆ. ಎಸ್ ಐಟಿಯಿಂದ ಸೂಕ್ತ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ಯಾವ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.
10th ಪಾಸಾದವರಿಗೆ ಗುಡ್ʼನ್ಯೂಸ್: ಭಾರತೀಯ ನೌಕಾಪಡೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾಳೆ ಜೆಡಿಎಸ್ ಪಕ್ಷದಿಂದ ಹುಬ್ಬಳ್ಳಿಯಲ್ಲಿ ಕೋರ್ ಕಮೀಟಿಸಭೆ ಕರೆಯಲಾಗಿದೆ. ಕೋರ್ ಕಮೀಟಿ ಸಭೆಯಲ್ಲಿ 14 ಕ್ಷೇತ್ರಗಳ ಪ್ರಮುಖರು ಭಾಗಿಯಾಗಲಿದ್ದಾರೆ.ಮಾಜಿ ಶಾಸಕರು, ಹಾಲಿಶಾಸಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು. ಈ ಪ್ರಕರಣದಿಂದಾಗಿ ಯಾವ ಅಭ್ಯರ್ಥಿಗೂ ಹಾಗೂ ಮೈತ್ರಿ ಪಕ್ಷಕ್ಕೂ ಪರಿಣಾಮ ಬೀರಲ್ಲ. ಇದು ವೈಯಕ್ತಿಕ ಪ್ರಕರಣ ಆಗಿರುವುದರಿಂದ ಯಾರಿಗೂ ಪರಿಣಾಮ ಬೀರಲ್ಲ ಎಂದು ಅವರು ಹೇಳಿದರು.