ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರು ಜಾಮೀನು ಅರ್ಜಿ ವಜಾ ಆಗಿದ್ದರಿಂದ ಅವರೇ ದೇವೇಗೌಡರ ಆಶೀರ್ವಾದ ಪಡೆದು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇನ್ನೂ ಸಂಸದ ಪ್ರಜ್ವಲ್ ರೇವಣ್ಣ ಅವರು ಶರಣಾಗಲಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್ ಪುಟ್ಟರಾಜು ಅವರು ಸುಳಿವು ಕೊಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರೋ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು,
APL Card: ಸಿಹಿ ಸುದ್ದಿ: ಜೂನ್ʼನಿಂದ APL ಪಡಿತರ ಚೀಟಿ ವಿತರಣೆ..! ಹೊಸ ಕಾರ್ಡ್ʼಗಳಿಗೆ ಅರ್ಜಿ ಆಹ್ವಾನ
ಪ್ರಜ್ವಲ್ ರೇವಣ್ಣ ಸರೆಂಡರ್ ಆಗುವ ಕೆಲಸ ಆಗುತ್ತದೆ. ಪ್ರಜ್ವಲ್ ಶರಣಾಗ್ತಾರೆ ಎಂದು ತಿಳಿಸಿದ್ದಾರೆ. ರೇವಣ್ಣ ಅವರ ಬೇಲ್ ವಜಾಗೊಂಡಿದೆ. ಬಳಿಕ ದೇವೇಗೌಡರ ಆಶೀರ್ವಾದ ಪಡೆದು ಅವರೇ ಶರಣಾಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರದ್ದು ಕಾನೂನು ಪ್ರಕಾರ ನಡೆಯುತ್ತಿದೆ. ಅವರು ಕೂಡ ಶರಣರಾಗುವ ಕೆಲಸ ಆಗಲಿದೆ. ಅವರು ಬರ್ತಾರೆ, ನಾನು ಕುಮಾರಸ್ವಾಮಿ ಜೊತೆ ಮಾತನಾಡಲು ಬಂದಿದ್ದೆ ಎಂದಿದ್ದಾರೆ.