ಬೆಂಗಳೂರು: ಜನರ ಕೈಯಲ್ಲಿ ಹರಿದಾಡುತ್ತಿರುವ ಫೋಟೋ, ವಿಡಿಯೋದಲ್ಲಿ ಎಲ್ಲೂ ಪ್ರಜ್ವಲ್ ರೇವಣ್ಣ ಮುಖ ಕಾಣಿಸಿಲ್ಲ ಎಂದು ಎಚ್ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ” ಹಾಸನದ ಪೆನ್ಡ್ರೈವ್ ಕೇಸ್ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೋ, ವಿಡಿಯೋದಲ್ಲಿ ಪ್ರಜ್ವಲ್ ರೇವಣ್ಣ ಮುಖ ಕಾಣಿಸುವುದಿಲ್ಲ. ಆದರೂ, ನಾವು ಸಹಿಸಿಕೊಂಡಿದ್ದೇವೆ. ಆರೋಪ ಎದುರಿಸುತ್ತಿದ್ದೇವೆ ” ಎಂದರು.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
“ದೇಶದ ಮಾಜಿ ಪ್ರಧಾನಮಂತ್ರಿಯ ಮಗನಾ ಇವನು? ಹಾಗಾದರೆ ಇವನ ಬಳಿ ಎಲ್ಲಾ ಮಾಹಿತಿಯೂ ಇದೆ ಎಂದಾಯಿತು. ಈತನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಕೊಟ್ಟಿರಬೇಕು ಅಥವಾ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರಬೇಕು, ತಪ್ಪದರೆ ಗೃಹ ಸಚಿವರೇ ತಿಳಿಸಿರಬಹುದು. ತನಿಖಾ ದಳಕ್ಕೆ ಜವಾಬ್ದಾರಿ ಎನ್ನುವುದಿದ್ದರೆ ರಾಹುಲ್ ಗಾಂಧಿಗೆ ತಕ್ಷಣವೇ ನೋಟೀಸ್ ಕೊಡಬೇಕು. ಕರೆದು ವಿಚಾರಣೆ ನಡೆಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದರು.