ಹುಬ್ಬಳ್ಳಿ:- ವಿರೋಧಿಗಳನ್ನು ರಾಜಕೀಯವಾಗಿ ಮುಗಿಸುವ ಕಲೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ಗೆ ಕರಗತವಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಗಂಭೀರ ಆರೋಪ: ಯಾಕಿದು?
ಕುಮಾರಸ್ವಾಮಿಯವರನ್ನು ರಾಜಕೀಯ ಮುಗಿಸುವ ಷಡ್ಯಂತ್ರ ಬಿಜೆಪಿ ಖಂಡಿತವಾಗಿಯೂ ಮಾಡುತ್ತಿಲ್ಲ, ಆ ಕೆಲಸದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ಸಿದ್ಧಹಸ್ತರು, ಯಾಕೆಂದರೆ 2018ರಲ್ಲಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿ ನಂತರ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ಉರುಳುವಂತೆ ಮಾಡಿದ್ದು ಅವರೇ.
ಹಾಗಾಗಿ ವಿರೋಧಿಗಳನ್ನು ರಾಜಕೀಯಗಿ ಮುಗಿಸುವ ಕಲೆ ಅವರಿಗೆ ಕರಗತವಾಗಿದೆ ಎಂದು ಜೋಶಿ ಹೇಳಿದರು. 2014 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಪಾಲರೇ ಇದ್ದರಲ್ಲ, ಅಗ ಯಾಕೆ ಕಾಂಗ್ರೆಸ್ ಸರ್ಕಾರ ಕುಮಾರಸ್ವಾಮಿಯವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಲಿಲ್ಲ ಎಂದು ಜೋಷಿ ಕೇಳಿದ್ದಾರೆ.