ಬೆಂಗಳೂರು:- ನಟ ದರ್ಶನ್ ಅವರನ್ನು ಬಚಾವ್ ಮಾಡೋಕೆ ಸಿಎಂ, ಗೃಹ ಸಚಿವರ ಮೇಲೆ ಒತ್ತಡ ಹೇರಲಾಗ್ತಿದ್ಯಾ ಎಂಬ ಗುಮಾನಿ ಮೂಡಿದೆ.
ದರ್ಶನ್ ಗೂ ಅತ್ಯಾಪ್ತರಾಗಿರೋ ಬೆಂಗಳೂರಿನ ಸಚಿವರ ಬಳಿ ಸಹಾಯ ಕೇಳಲಾಗಿದೆ ಎನ್ನಲಾಗಿದೆ. ಸಿಎಂ ಹಾಗೂ ಗೃಹಸಚಿವರಿಗೆ ಪ್ರಭಾವಿ ಸಚಿವರಿಂದ ಒತ್ತಡ ಬಂದಿದೆಯಾ? ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಚಾವ್ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎನ್ನಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Bagalakote: ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ ಸಾರ್ವಜನಿಕರು ಎಚ್ಚರ ವಹಿಸಿ… ಪೌರಾಯುಕ್ತ ಜಗದೀಶ
ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿದೆ. ಬೆಂಗಳೂರಿನ ಸಚಿವರ ಬಳಿ ಸಹಾಯ ಕೇಳಲಾಗಿದೆ ಎಂದು ಹೇಳಿದ್ದರೂ ಅದು ಯಾರು ಎನ್ನುವುದು ರಿವೀಲ್ ಆಗಿಲ್ಲ.
ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳವಾರ ಸಂಜೆ 13 ಜನರನ್ನು ಕೋರ್ಟ್ ಮುಂದೆ ಹಾಜರು ಮಾಡಲಾಗಿದ್ದು ಈ ವೇಳೆ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು 6 ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ದರ್ಶನ್, ಪವಿತ್ರಾ ಗೌಡ ಅವರ ಜೊತೆ ಪವನ್, ವಿನಯ್, ಪ್ರದೋಷ್, ನಂದೀಶ, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ,ರಾಘವೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ. ಪವಿತ್ರಾ ಗೌಡ ಅವರು ಆರೋಪಿ 1, ದರ್ಶನ್ ಆರೋಪಿ 2 ಎಂದು ಹೇಳಲಾಗಿದೆ.
ಆರೋಪಿ ದರ್ಶನ್ ಹಾಗೂ ಸಹಚರರು ಕೋರ್ಟ್ ಹಾಲ್ ನಲ್ಲಿ ಕೈ ಕಟ್ಟಿ ತಲೆ ತಗ್ಗಿಸಿ ನಿಂತಿದ್ದರು. ನಿಮ್ಮನ್ನ ಯಾವಾಗ ಅರೆಸ್ಟ್ ಮಾಡಿದ್ರು ಅಂತ ದರ್ಶನ್ ಗೆ ಜಡ್ಜ್ ಕೇಳಿದ್ದಾರೆ. ಅರೆಸ್ಟ್ ಆಗಿದ್ದರ ಬಗ್ಗೆ ಮನೆಯವರಿಗೆ ಮಾಹಿತಿ ಕೊಟ್ರಾ? ವಕೀಲರನ್ನು ನೇಮಿಸಕೊಂಡ್ರಾ? ಪೊಲೀಸರು ಏನಾದ್ರೂ ತೊಂದರೆ ಕೊಟ್ರಾ ಎನ್ನುವ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)