ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬಾಗಲಕೋಟೆ ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶ’ದಲ್ಲಿ ನಡೆಯಿತು. ಬಾಗಲಕೋಟೆ, ವಿಜಯಪುರ ಸೇರಿದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು ವಿಕಸಿತ ಭಾರತಕ್ಕಾಗಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಭಾರತ ಮಾತಾ ಕಿ ಜೈ ಘೋಷಣೆಯೊಂದಿಗೆ ಮುಗಿಲು ಮುಟ್ಟಿತು.ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಚಿತ್ರಣವನ್ನೇ ಬದಲಿಸಿದ್ದು, ಮತ್ತೊಮ್ಮೆ ಮೋದಿ ಅವರೇ ದೇಶದ ಪ್ರಧಾನಿ ಆಗಬೇಕು ಎನ್ನುವುದು ನಮ್ಮೆಲ್ಲ ಕಾರ್ಯಕರ್ತರ ಒಮ್ಮತದ ಅಭಿಮತ ವಾಗಿದೆ ಎಂದರು ಬಾಗಲಕೋಟೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಹೇಳಿದರು.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ. ಸಂಸದರು, ವಿಧಾನ ಪರಿಷತ್ ಸದಸ್ಯರು, ಹಾಲಿ-ಮಾಜಿ ಶಾಸಕರು, ಬಿಜೆಪಿ-ಜೆಡಿಎಸ್ ಪಕ್ಷಗಳ ನಾಯಕರು, ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ