ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವನೆ ಕಾವು ರಂಗೇರಿದೆ. ಈಗಾಗಲೇ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಮೇ 7ರಂದು ರಾಜ್ಯದ ಉತ್ತರ ಕರ್ನಾಟಕದ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಿದ್ದು,
ಖಾಸಗಿ ಹೊಟೇಲ್ನಲ್ಲಿ ತಂಗಿದ್ದಾರೆ. ಇಂದು ಬೆಳಗ್ಗೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಜೊತೆ ಮೋದಿ ಉಪಹಾರ ಸೇವಿಸಿದರು. 10.55ಕ್ಕೆ ಹೋಟೆಲ್ನಿಂದ ಹೊರಟು, 11 ಗಂಟೆಗೆ ನಗರದ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
Small Saving: ಈ ಯೋಜನೆಯಲ್ಲಿ 417ರೂ. ಹೂಡಿಕೆ ಮಾಡಿದ್ರೆ ಮಿಲೇನಿಯರ್ ಆಗಬಹುದು..! ಹೇಗೆ ಗೊತ್ತಾ..?
ಇಂದು ಮತ್ತು ನಾಳೆ ರಾಜ್ಯದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಒಟ್ಟು ಐದು ಕ್ಷೇತ್ರಗಳಲ್ಲಿನ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಒಂದು ಒಂದೇ ದಿನ ನಾಲ್ಕು ಕ್ಷೇತ್ರಗಳಲ್ಲಿ ಮೋದಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಳಗಾವಿ, ದಾವಣಗೆರೆ, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ವಿಜಯನಗರ ಹೊಸಪೇಟೆಯಲ್ಲಿ ಜಿಲ್ಲೆಯ ಅಭ್ಯರ್ಥಿಗಳ ಪರ ಅವರು ಮತಯಾಚಿಸಲಿದ್ದಾರೆ. ಮೊದಲಿಗೆ ಮೋದಿ ಬೆಳಗಾವಿಯಿಂದಲೇ ಪ್ರಚಾರ ಆರಂಭಿಸಿದ್ದಾರೆ.