ಹುಬ್ಬಳ್ಳಿ:-ಪ್ರಧಾನಿ ಮೋದಿಯೇ ಕರ್ನಾಟಕದ ದುಸ್ಥಿತಿಗೆ ಕಾರಣ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅದರಿಂದಾಗಿ ರಾಜ್ಯಕ್ಕೆ ಪದೇ-ಪದೇ ಅನ್ಯಾಯವಾಗುತ್ತಿದೆ ಎಂದರು.
ರಾಜ್ಯದ ದುಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣರಾಗಿದ್ದು, ಕೇಂದ್ರ ಸಚಿವರು, ಅಧಿಕಾರಿಗಳನ್ನು ಪ್ರಧಾನಿ ಕಿವಿ ಹಿಂಡುವ ಕೆಲಸ ಮಾಡಬೇಕು. ಕಾಂಗ್ರೆಸ್ ನಾಯಕರು ಮಾಡುವ ಟೀಕೆಯನ್ನು ಅರಗಿಸಿಕೊಳ್ಳಲು ಆಗಲ್ಲಾ ಅಂದರೆ ಅದು ನಿಮ್ಮ ಅಹಂಕಾರವನ್ನು ತೋರಿಸುತ್ತಿದೆ ಎಂದು ಪರೋಕ್ಷವಾಗಿ ಸಚಿವ ಜೋಶಿ ವಿರುದ್ಧ ಕಿಡಿಕಾರಿದರು. ಇತ್ತೀಚಿಗೆ ಮೋದಿಯವರಿಗೆ ಅಧಿಕಾರದ ಮದ ಜಾಸ್ತಿಯಾದಂತೆ ಕಾಣಿಸುತ್ತದೆ ಎಂದು ಶೆಟ್ಟರ್ ಟೀಕಿಸಿದರು.
ಹಿಂದಿನ ಸರ್ಕಾರದಲ್ಲಿ ಶೇ. 40ರಷ್ಟು ಭ್ರಷ್ಟಾಚಾರ ನಡೆದಿರುವ ಬಗ್ಗೆ ಕೆಂಪಣ್ಣ ಅವರು ಆರೋಪಿಸಿ, ಕೆಲ ದಾಖಲೆ ನೀಡಿದ್ದಾರೆ. ಆ ಕುರಿತು ನಾಗಮೋಹನದಾಸ್ ಸಮಿತಿ ನಿಷ್ಪಕ್ಷವಾಗಿ ತನಿಖೆ ನಡೆಸುತ್ತಿದೆ. ಬಿಜೆಪಿಯವರು ಕಾಂಗ್ರೆಸ್ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ತಪ್ಪಿತಸ್ಥರು ಯಾವುದೇ ಪಕ್ಷದವರಿರಲಿ ಅವರಿಗೆ ಶಿಕ್ಷೆಯಾಗಲೇಬೇಕು ಎಂದು ಶೆಟ್ಟರ್ ಆಗ್ರಹಿಸಿದರು.