ಬೆಂಗಳೂರು: ಯುಗಾದಿ, ರಂಜಾನ್, ಬೇಸಿಗೆ ರಜೆ ಕಾರಣ ಮಕ್ಕಳ ಜೊತೆ ಪ್ರವಾಸ ಅಥವಾ ತಮ್ಮ ತಮ್ಮ ಊರಿಗೆ ತೆರಳಲು ಪೋಷಕರು ಯೋಚಿಸಿದ್ದಾರೆ. ಬಸ್ ಟಿಕೆಟ್ ಬುಕ್ ಮಾಡಲು ಮುಂದಾದರೆ ದರ ಏರಿಕೆಯ ಶಾಕ್ ಎದುರಾಗಿದೆ. ಖಾಸಗಿ ಬಸ್ ಮಾಲೀಕರು 2-3 ಪಟ್ಟು ದರ ಏರಿಕೆ ಮಾಡಿದ್ದಾರೆ. ಅದ್ರೆ ಇದೇ ಸಮಯಕ್ಕೆ ಕೆಎಸ್ ಆರ್ ಟಿ ಸಿ ಯಿಂದ ಹೆಚ್ಚುವರಿ ಬಸ್ ಬಿಟ್ಟಿರುವುದು ಜನರ ಮುಖದಲ್ಲಿ ಮಂದಹಾಸ ಉಂಟುಮಾಡಿದೆ.. ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್..
ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆಯಿದೆ ಅಂತ ಮನೆ ಕಡೆ ಹೊಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ ಶಾಕ್ ಎದುರಾಗಿದೆ.ಯುಗಾದಿ ರಜೆ ಬೆಲ್ಲವಾದರೆ ಖಾಸಗಿ ಬಸ್ಗಳ ಪ್ರಯಾಣದ ದರ ಏರಿಕೆ ಪ್ರಯಾಣಿಕರಿಗೆ ಬೇವು ಆಗಿದೆ.ಏಪ್ರಿಲ್ 7 ರಂದು ಭಾನುವಾರ, 9 ರಂದು ಮಂಗಳವಾರ ಯುಗಾದಿ ಬರುತ್ತೆ. ಹೀಗಾಗಿ ಸೋಮವಾರ ರಜೆ ಹಾಕಿ ನಾಳೆಯೇ ಊರಿಗೆ ತೆರಳಲು ಜನರ ಪ್ಲಾನ್ ಮಾಡಿದ್ದಾರೆ.
ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…! ನಿರ್ದೇಶನ ಮಾಡುತ್ತಿರುವುದು ಯಾರು?
ಇನ್ನೂ ಕೆಲವರು ಇಂದು ಆಫೀಸ್ಗೆ ರಜೆ ಹಾಕಿ ಬೆಂಗಳೂರಿನಿಂದ ಹೊರಟಿದ್ದಾರೆ. ಅಲ್ಲದೆ ಯುಗಾದಿ ರಜೆ ಒಂದು ದಿನ ಬಿಟ್ಟು ಗುರುವಾರ ರಂಜಾನ್ ರಜೆ ಬರುತ್ತೆ. ಅಲ್ಲದೆ 13 ರಂದು ಎರಡನೇ ಶನಿವಾರ ರಜೆ ಹಾಗೂ 14 ರಂದು ಭಾನುವಾರ ರಜೆ ಇದೆ. ಏಪ್ರಿಲ್ 7 ರಿಂದ ಏಫ್ರಿಲ್ 14ರ ವರೆಗೆ ಬರೊಬ್ಬರಿ 5 ರಜೆಗಳು ಇವೆ. ಹೀಗಾಗಿ ಕೆಲವರು ನಾಳೆಯಿಂದ ವಾರಪೂರ್ತಿ ಆಫೀಸ್ಗೆ ರಜೆ ಹಾಕಲು ಪ್ಲಾನ್ ಮಾಡಿಕೊಂಡು ಬೆಂಗಳೂರು ಬಿಟ್ಟು ಊರಿಗೆ ಹೊರಡುತ್ತಿದ್ದಾರೆ.
ಅಲ್ಲದೆ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ಅಥವಾ ತಮ್ಮ ತಮ್ಮ ಊರಿಗೆ ತೆರಳಲು ಪೋಷಕರು ಯೋಚಿಸಿ, ಬಸ್ ಟಿಕೆಟ್ ಬುಕ್ ಮಾಡಲು ಮುಂದಾದರೆ ದರ ಏರಿಕೆಯ ಶಾಕ್ ನೀಡಿದೆ. ಖಾಸಗಿ ಬಸ್ ಮಾಲೀಕರು 2-3 ಪಟ್ಟು ದರ ಏರಿಕೆ ಮಾಡಿದ್ದಾರೆ. ಇನ್ನು ಕೆಎಸ್ಆರ್ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಾಲ್ಕು ನಿಗಮದಿಂದ ಬರೊಬ್ಬರಿ 2000ಕ್ಕೂ ಅಧಿಕ ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ಮುಂದಾಗಿದೆ.
ಕೆಎಸ್ಆರ್ಟಿಸಿಯಿಂದ 1,750 ಬಸ್, ಎನ್ಡಬ್ಲೂಕೆಎಸ್ಆರ್ಟಿಸಿಯಿಂದ 145 ಬಸ್ ಮತ್ತು ಕೆಕೆಆರ್ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ಸೇರಿ 2275 ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ.ಖಾಸಗಿ ಬಸ್ಗಳಲ್ಲಿ ದರ ಏರಿಕೆ ಮಾಡುತ್ತಾರೆ. ಕೆಎಸ್ಆರ್ಟಿಸಿಯ ಸಾಮಾನ್ಯ ಬಸ್ಗಳಲ್ಲಿ ದರ ಕಡಿಮೆ ಇದೆ ಎಂದು ಪ್ರಯಾಣಿಕ ಹೇಳಿದರು. ಒಟ್ಟಾರೆ ಬ್ಯಾಕ್ ಟು ಬ್ಯಾಕ್ ರಜೆ ಬಂದಾಗ ಪದೇ ಪದೇ ದರ ಏರಿಕೆಯಾದರೂ ಸಾರಿಗೆ ಇಲಾಖೆ ಮೌನಾವಾಗಿದೆ ಯಾಕೆ ಎಂಬ ಪ್ರಶ್ನೆ ಮೂಡಿದೆ. ಸಾರಿಗೆ ಇಲಾಖೆ ಇನ್ನೂ ಕೂಡ ಈ ಹಗಲು ದರೋಡೆಗೆ ಬ್ರೇಕ್ ಹಾಕದೆ ಇರುವುದು ಜನರ ಕಂಗೆಣ್ಣಿಗೆ ಗುರಿಯಾಗಿದೆ.