ಶಿವಮೊಗ್ಗ:– ಪೆನ್ ಡ್ತೈವ್ ಬಿಡುಗಡೆ ಹಿಂದೆ ಕುತಂತ್ರ ಕಾಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಖಾಸಗಿ ಬಸ್ ನಿಲ್ದಾಣದ ಮಳಿಗೆಯಲ್ಲಿ ಅಗ್ನಿ ಅವಘಡ.. ವಸ್ತುಗಳೆಲ್ಲಾ ಸುಟ್ಟು ಕರಕಲು..!
ಪ್ರಜ್ವಲ್ ಅವರ ಖಾಸಗಿ ವೀಡಿಯೊ ಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮತದಾನಕ್ಕೆ ಕೇವಲ ಮೂರು ದಿನ ಬಾಕಿಯಿರುವಾಗ ಪೆನ್ ಡ್ತೈವ್ ಗಳನ್ನು ಬಿಡುಗಡೆ ಮಾಡಿರುವ ಹಿಂದೆ ಕುತಂತ್ರ ಕಾಣಿಸುತ್ತಿದೆ, ಅವುಗಳನ್ನು ಬಿಡುಗಡೆ ಮಾಡಿದ್ದು ಯಾರು? ಬಿಡಯಗಡೆ ಮಾಡುವುದೇ ಅವರ ಉದ್ದೇಶವಾಗಿದ್ದರೆ ಮೊದಲ್ಯಾಕೆ ಮಾಡಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಸರ್ಕಾರ ಎಸ್ ಐಟಿ ಯನ್ನು ರಚನೆ ಮಾಡಿದೆ, ತನಿಖೆ ನಡೆಯಲಿ ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸಲಿ ಎಂದು ಕುಮಾರಸ್ವಾಮಿ ಹೇಳಿದರು. ಪ್ರಜ್ವಲ್ ಈಗ ಎಲ್ಲಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಸಿಡುಕಿದ ಕುಮಾರಸ್ವಾಮಿ, ಅದು ತನಗೆ ಹೇಗೆ ಗೊತ್ತಾಗುತ್ತದೆ ಎಂದರು. ಪ್ರಜ್ವಲ್ ತಪ್ಪಿತಸ್ಥರಾಗಿದ್ದರೆ ಪಕ್ಷ ಸಹ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಿದೆ ಎಂದು ಕುಮಾರಸ್ವಾಮಿ ಹೇಳಿದರು.