ಬೆಂಗಳೂರು:– ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿಡಿ ವಾರ್ನಿಂಗ್ ಬಳಿಕ ಭಾರತಕ್ಕೆ ಪ್ರಜ್ವಲ್ ಕರೆಸಲು ಕಸರತ್ತು ನಡೆದಿದೆ.
ನೆಲಮಂಗಲ: ಸರಣಿ ಅಪಘಾತ.. ಪಲ್ಟಿಯಾಗಿ ಬಿದ್ದ ಬುಲೇರೋ ಗೂಡ್ಸ್ ವಾಹನ!
ಪ್ರಜ್ವಲ್ ರೇವಣ್ಣನನ್ನು ಭಾರತಕ್ಕೆ ಕರೆಸಿಕೊಳ್ಳಲು ಕುಟುಂಬಸ್ಥರು ಭಾರಿ ಪ್ರಯತ್ನ ಪಡುತ್ತಿದ್ದಾರೆ. ಮತ್ತೊಂದೆಡೆ ವಿಡಿಯೋ ವೈರಲ್ ಪ್ರಮುಖ ಆರೋಪಿಗಳಾದ ನವೀನ್ ಗೌಡ ಹಾಗು ಬೇಲೂರು ಮಾಜಿ ಶಾಸಕ ಲಿಂಗೇಶ್ ಅವರದ್ದು ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.
ಅಶ್ಲೀಲ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಕುಳಿತಿದ್ದಾರೆ. ಅವರನ್ನು ದೇಶಕ್ಕೆ ಕರೆತರಲು ಭಾರೀ ಕಸರತ್ತು ನಡೆಯುತ್ತಿದೆ. ಎಲ್ಲಿದ್ರೂ ಬಾ. ಬಂದು ಶರಣಾಗು. ಇಲ್ಲದಿದ್ರೆ ಒಂಟಿಯಾಗ್ತಿಯಾ. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ ಎಂದು ವಿದೇಶದಲ್ಲಿ ತಲೆಮರೆಸಿಕೊಂಡಿರೋ ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿ ದೇವೇಗೌಡರು ಎಚ್ಚರಿಕೆ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಪ್ರಜ್ವಲ್ಗೆ ಪತ್ರ ಬರೆದ ಹೆಚ್ಡಿಡಿ ದೇಶಕ್ಕೆ ವಾಪಸ್ ಆಗುವಂತೆ ಹೇಳಿದ್ದಾರೆ.
ಗೌಡರ ವಾರ್ನಿಂಗ್ ಬೆನ್ನಲ್ಲೇ ಪ್ರಜ್ವಲ್ ಕರೆಸಲು ಕಸರತ್ತು ಜೋರಾಗಿದೆ. ಪ್ರಜ್ವಲ್ ಸಂಪರ್ಕಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ. ಪ್ರಜ್ವಲ್ ತಾಯಿ ಭವಾನಿ ರೇವಣ್ಣರ ಕಡೆಯ ಸಂಬಂಧಿಕರ ಮೂಲಕ ಪ್ರಜ್ವಲ್ ದೇಶಕ್ಕೆ ಕರೆಸಲು ಪ್ರಯತ್ನ ನಡೆಯುತ್ತಿದೆ. ವಿದೇಶದಲ್ಲಿರುವ ಪ್ರಜ್ವಲ್ ಸ್ನೇಹಿತರ ಮೂಲಕ ಸಂಪರ್ಕಕ್ಕಕ್ಕೂ ಪ್ರಯತ್ನ ಪಡಲಾಗುತ್ತಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಪ್ರಜ್ವಲ್ ಕರೆಸಿ ಎಸ್ಐಟಿ ಮುಂದೆ ಹಾಜರ್ ಮಾಡಿಸಲು ಶತ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ನೀಡಿದೆ. ಒಂದು ವೇಳೆ ಪ್ರಜ್ವಲ್ ಪಾಸ್ ಪೋರ್ಟ್ ರದ್ದಾದರೆ ಈ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿ ಕುಟುಂಬಕ್ಕೆ ತೀವ್ರ ಮುಜುಗರ ಉಂಟಾಗುತ್ತದೆ. ಹೀಗಾಗಿ ಮುಜುಗರ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿದೇಶದಿಂದ ಕರೆಸಲು ಎಲ್ಲಾ ಆಯಾಮದಲ್ಲೂ ಕುಟುಂಬಸ್ಥರು ಪ್ರಯತ್ನಿಸುತ್ತಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)