ಬೆಂಗಳೂರು:- ಮಾನವ ಜೀವಕ್ಕೆ ಅಪಾಯಕಾರಿ ಶ್ವಾನಗಳ ಸಾಕಾಣಿಕೆಗೆ ನಿಷೇಧ ಹೇರಿದ್ದ ಕೇಂದ್ರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯೊಂದಿಗೆ ಸಮಾಲೋಚಿಸಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಕೆಲ ಶ್ವಾನ ತಳಿ ನಿಷೇಧಿಸಿ ಕೇಂದ್ರ ಸರ್ಕಾರ ಹೊಡಸಿದ್ದ ಸುತ್ತೋಲೆ ಪ್ರಶ್ನಿಸಿ ಕಿಂಗ್ ಸಾಲೊಮನ್ ಡೇವಿಡ್ ಮತ್ತಿತರರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರದ ನಿಷೇಧ ಸುತ್ತೋಲೆಯನ್ನು ರದ್ದುಗೊಳಸಿದೆ. ಕಾಯ್ದೆಯಡಿ ರಚಿಸಿದ ಸಮಿತಿಯ ಶಿಫಾರಸು ಮಾತ್ರ ಪರಿಗಣಿಸಬೇಕು. ಕ್ರಮಕ್ಕೆ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯೊಂದಿಗೆ ಸಮಾಲೋಚಿಸಬೇಕು. ಸರ್ಕಾರ ಶ್ವಾನ ತಳಿ ನಿಷೇಧಿಸುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು. ಶ್ವಾನ ಪಾಲಕರ ಮೇಲೆಯೂ ಹೊಣೆನಿಗದಿಪಡಿಸುವ ಅಗತ್ಯವಿದೆ. ಶ್ವಾನ ಕಡಿತಕ್ಕೊಳಗಾದವರಿಗೆ ಚಿಕಿತ್ಸೆ, ನಷ್ಟಪರಿಹಾರದಂತಹ ಹೊಣೆ ನಿಗದಿ ಸೂಕ್ತ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)