ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಅಧಿಕೃತ ಚಾಲನೆ ಸಿಗಲಿದೆ. ಇಂದಿನಿಂದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ರಾಜ್ಯದಲ್ಲಿ ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಹಿನ್ನೆಲೆ ಇಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Bengaluru-Mysuru Expressway: ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ
ನಿಷೇಧಾಜ್ಞೆ ನಿಬಂಧನೆಗಳು
- ಕಾನೂನು ಸುವ್ಯವಸ್ಥೆ ಭಂಗವುಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು
- ಮೆರವಣಿಗೆ, ಸಭೆಗಳನ್ನು ನಡೆಸುವುದು ಮತ್ತು ಧ್ವನಿವರ್ದಕಗಳು ಬಳಸುವಂತಿಲ್ಲ
- ಶಸ್ತ್ರಾಸ್ತ್ರಗಳನ್ನು, ದೊಣ್ಣೆಗಳನ್ನು ಕತ್ತಿಗಳನ್ನು, ಈಟೆಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂ ಮುಂತಾದ ಮಾರಾಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ತರುವಂತಿಲ್ಲ.
- ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳು ಅಥವಾ ಉಪಕರಣೆಗಳನ್ನು ತರುವಂತಿಲ್ಲ, ಶೇಖರಿಸಬಾರದು
- ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನ ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದಕ್ಕೆ ನಿಷೇಧ ಹೇರಲಾಗಿದೆ.