ವಿಜಯಪುರ: ಸಚಿವ ಶಿವರಾಜ್ ತಂಗಡಗಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಕಾರ್ಯಕರ್ತರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಪ್ರಧಾನಿ ಮೋದಿ ವಿರುದ್ಧ ಸಚಿವ ತಂಗಡಗಿ ಅವಹೇಳನಕಾರಿ ಹೇಳಿಕೆ ಖಂಡನೀಯ ವಾಗಿದ್ದು, ತಕ್ಷಣವೇ ಸಚಿವ ಶಿವರಾಜ ತಂಗಡಗಿ ಕ್ಷಮೆ ಕೇಳಬೇಕು ಎಂದು ಸಚಿವ ತಂಗಡಗಿ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಒತ್ತಾಯ ಮಾಡಿದರು.