ಧಾರವಾಡ: ರಾಜ್ಯ ಸಭಾ ಚುನಾವಣೆಯ ನಂತರ ಕಾಂಗ್ರೆಸ್ ನಾಯಕರ ವಿಜಯೋತ್ಸವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದನ್ನು ಖಂಡಿಸಿ ಹಾಗೂ ನೂತನರಾಜ್ಯ ಸಭಾ ಸದಸ್ಯ ನಾಸೀರ ಹುಸೇನ್ ರಾಜೀನಾಮೆ ಅಗ್ರಹಿಸಿ ಧಾರವಾಡದಲ್ಲಿ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ನಾಸೀರ ಹುಸೇನ್ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿ ಆಕ್ರೋಶ ಹೊರಹಾಕಿದರು.
ವೈ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ, ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ, ನೂತನ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಸೇರಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ನಾಸೀರ ಹುಸೇನ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿ ತಮ್ಮ ಅಸಮಧಾನ ವ್ಯಕ್ತಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ, ದೇಶದ್ರೋಹದ ಘೋಷಣೆಗಳು ಕೇಳಿ ಬರುತ್ತಲೇ ಇವೆ.
![Demo](https://ainlivenews.com/wp-content/uploads/2023/12/spoorthi-1.jpg)
ಇದು ಕಾಂಗ್ರೆಸ್ ನಾಯಕರ ಓಲೈಕೆ ರಾಜಕಾರಣ ಪರಮಾವಧಿಯಾಗಿದೆ. ಇಷ್ಟು ದಿನ ಹಾದಿ ಬಿದಿಯಲ್ಲಿ ಕೂಗುತ್ತಾ ಓಡಾಡುತ್ತಿದ್ದ, ದೇಶದ್ರೋಹಿಗಳು ಈಗ ರಾಜ್ಯದ ಶಕ್ತಿ ಸೌಧದದಲ್ಲಿಯು ಇದನ್ನು ಮುದುವರೆಸಿದ್ದಾರೆ. ಹಾಗಾಗಿ ಈ ಕೂಡಲೇ ರಾಜ್ಯ ಸಭಾ ಮೆಂಬರ್ ಆಗಿ ಅಯ್ಕೆಯಾಗಿರೋ ನಾಸೀರ ಹುಸೇನ್ ತಕ್ಷಣೆ ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿದರು. ಅಲ್ಲದೆ ದೇಶದ್ರೋಹಿ ಘೋಷಣೆ ಕೂಗಿದವರ ಕೂಡಲೇ ಬಂಧನವಾಗಬೇಕು ಎಂದು ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)