ತುಮಕೂರು: ತಹಶೀಲ್ದಾರ್ ಮತ್ತು ತಾಲೂಕು ಸಮಾಜಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಸ್ಮಶಾನ ಜಾಗ ಕೇಳಲು ಹೋದ ದಲಿತರನ್ನ ಗುಬ್ಬಿ ತಹಶಿಲ್ದಾರ್ ಆರತಿ ಬಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೀಣಾ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
ದಲಿತರಿಗೆ ಸರಿಯಾಗಿ ಸ್ಪಂದಿಸದೆ ನ್ಯಾಯ ಕೇಳಲು ಹೋದ ದಲಿತರ ಮೇಲೆ TSW ವೀಣಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ದಲಿತ ಸಂಘಟನೆಗಳಿಂದ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವವರೆಗೂ ಪ್ರತಿಭಟನೆ ನಿಲ್ಲಲ್ಲ ಎನ್ನುತ್ತಿರುವ ಪ್ರತಿಭಟನಾಕಾರರು..