ಬೆಳಗಾವಿ :- ಜಿಲ್ಲೆಯ ಅಥಣಿ ತಾಲೂಕಾ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಇಂದು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆಯನ್ನ ನಡೆಸಿ ತಹಶೀಲ್ದಾರ್ ಮುಖಾಂತರ ಮನವಿ ಪತ್ರವನ್ನು ಸಲ್ಲಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಭಾರಿಯಾದ ಬಸವರಾಜ ಯಂಕ್ಕಚ್ಚಿ ಮಾತನಾಡಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ರೈತ ಪರ ಯೋಜನೆಗಳನ್ನ ಜಾರಿಗೆ ತಂದಿತ್ತು,ಅವುಗಳನೆಲ್ಲ ಕಾಂಗ್ರೆಸ್ ಪಕ್ಷ ಹಿಂಪಡೆದು ರೈತ ವಿರೋಧಿ ನೀತಿ ಅನುಸರಿಸುತ್ತಾ ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದರು. ರೈತರ ಹಾಲಿಗೆ ಪ್ರೋತ್ಸಾಹ ಧನ 7 ರೂಪಾಯಿ ಕೊಡುತ್ತೇವೆ ಎಂದು ಹೇಳಿ ರೈತರಿಗೆ ಮೋಸ ಮಾಡಿದೆ,ಅಷ್ಟೇ ಅಲ್ಲದೆ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ರೈತರ ಮಕ್ಕಳಿಗೆ ಅನುಕೂಲವಾಗಲಿ ಎಂದು ರೈತನಿಧಿ ಯೋಜನೆಯನ್ನು ಜಾರಿಗೆ ತಂದಿತ್ತು ಅದನ್ನು ಸಹ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ.ಕಾಂಗ್ರೆಸ್ ಪಕ್ಷದವರು ತಂದ ಐದು ಗ್ಯಾರಂಟಿ ಯೋಜನೆಗಳು ಯಾರಿಗೂ ಸಹ ಸರಿಯಾಗಿ ತಲುಪಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ತ್ರೀವವಾದ ವಾಗ್ದಾಳಿ ನಡೆಸಿದರು, ಇನ್ನು ಮುಂದೆಯಾದರೂ ಕೋಟ್ಟ ಮಾತಿನಂತೆ ರೈತರ ಹಾಲಿಗೆ ಪ್ರೋತ್ಸಾಹ ಧನ ನೀಡದೆ ಹೋದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯನ್ನ ನೀಡಿದರು
ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ ಅಪ್ಪಾಜೀಗೋಳ,ಅಥಣಿ ತಾಲೂಕಾ ಮಂಡಲ ಅಧ್ಯಕ್ಷರಾದ ರವಿ ಸಂಕ, ಕಾಗವಾಡ ತಾಲೂಕಾ ಮಂಡಲ ಅಧ್ಯಕ್ಷರಾದ ಶಿವಾನಂದ ನವಿನಾಳೆ ,ಸಿದ್ದು ಮಾಳಿ ಅಪ್ಪಾಸಾಬ ಅವತಾಡೆ ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.