ಬೆಂಗಳೂರು: ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ನಾಗೇಂದ್ರ ತಲೆದಂಡವಾದ ಬೆನ್ನಲ್ಲೆ ಇದೀಗ ಸರ್ಕಾರದ ವಿರುದ್ದ ಮತ್ತೊಂದು ಆರೋಪ ಕೇಳಿಬಂದಿದೆ. ಅದ್ರಲ್ಲೂ ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೋಟಿ- ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ ಅಂತ ವಿಪಕ್ಷಗಳು ಸರ್ಕಾರದ ವಿರುದ್ದ ಪ್ರಶ್ನೆಗಳ ಸುರಿಮಳೆ ಮಾಡ್ತಿದ್ದಾರೆ.
ಇನ್ನೂ ಇದಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ & ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಕುಮಾರಕೃಪಾ ಗೆಸ್ಟ್ ಹೌಸ್ನಿಂದ ಸಿಎಂ ನಿವಾಸಕ್ಕೆ ಮೆರವಣಿಗೆ ಮೂಲಕ ತೆರಳಲಿ ಸಿಎಂ ಸಿದ್ದರಾಮಯ್ಯ ಮನೆ ಮುತ್ತಿಗೆ ಹಾಕಲಿದ್ದು, ಬಿಜೆಪಿಯ ಪ್ರತಿಭಟನೆ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ.
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ವಾಲ್ಮೀಕಿ ಹಗರಣ ವಿಚಾರವಾಗಿ ಸಿಎಂ ಹಾಗೂ ಸಚಿವರಾದ ಶರಣು ಪ್ರಕಾಶ್ ಪಾಟೀಲ್ ಸೇರಿದಂತೆ ನಿಗಮದ ಹಲವು ಅಧಿಕಾರಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅದೇ ರೀತಿ ಮುಡಾ & ವಾಲ್ಮೀಕಿ ನಿಗಮ ಪ್ರಕರಣವನ್ನು CBIಗೆ ವಹಿಸುವಂತೆ ಪ್ರತಿಭಟನೆ ಮಾಡಲಿದ್ದಾರೆ.