ಹುಬ್ಬಳ್ಳಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಮೀಸಲಾತಿ ವಿಧೇಯಕ ಜಾರಿಯಾಗಲಬೇಕೆಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಕಾರ್ಯಕರ್ತರು ವಿಧೇಯಕ ವಿರೋಧಿಸಿದ ಉದ್ಯಮಿಗಳಿಗೆ ದಿಕ್ಕಾರ ಕೂಗಿದರು.
ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೆ ಸರ್ಕಾರ ಮುಂದಾಗಿತ್ತು. ಆದರೆ ಮೋಹನ್ ದಾಸ್ ಪೈ, ಕಿರಣ್ ಮಜುಂದಾರ್ ಶಾ ಸೇರಿದಂತೆ ಹಲವು ಉದ್ಯಮಿಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಯೂಟರ್ನ್ ಹೊಡೆದಿದೆ.