ದಾವಣಗೆರೆ: ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಮತ್ತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಪ್ರತಿಭಟನೆ ನಡೆಸಲಾಗಿದೆ. ದಾಣಗೆರೆಯ ಮಹಾನಗರ ಪಾಲಿಕೆ ಮುಂದೆ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆ ನಡೆಸಿದ ಸದಸ್ಯರು ಬಳಿಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿಯನ್ನ ಸಲ್ಲಿಸಿದ್ದಾರೆ.
ಆರ್. ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮತ್ತು ಮಹಿಳೆಯರ ವಿರುದ್ಧ ಕಳೆದ ಡಿ. 24 ರಂದು ಮಂಡ್ಯದಲ್ಲಿ ಅತ್ಯಂತ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಇದು ಖಂಡನೀಯ. ಈ ಹಿಂದೆಯೂ ಸಹ ಕಲ್ಲಡ್ಕ ಪ್ರಭಾಕರ್ ‘ಭಟ್ ರಾಜ್ಯದ ಅನೇಕ ನಗರಗಳಲ್ಲಿ ಧರ್ಮ ಧರ್ಮಗಳನ್ನ ಎತ್ತಿ ಕಟ್ಟಿ ಗಲಭೆ ನೆಡೆಸುವ ಪ್ರಯತ್ನ. ಹಾಗೂ ಪ್ರಚೋದಿಸುವ ರೀತಿಯಲಿ ವರ್ತಿಸಿದ್ದಾರೆ. ಮಂಡ್ಯದಲ್ಲಿ ನಡೆದ ಘಟನೆಯಲ್ಲಿ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ, ಪ್ರಚೋದಿಸಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.