ಬಳ್ಳಾರಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಖಂಡಿಸಿ ಬಳ್ಳಾರಿಯ ರೈಲ್ವೇ ನಿಲ್ದಾಣದ ಪಕ್ಕ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ವಿವಿಧ ಸಂಘಟನೆಯ ನೂರಾರು ಸದಸ್ಯರಿಂದ ಆರೋಪಿ ಫಯಾಜ್ ನನ್ನು ಗಲ್ಲಿಗೆ ಏರಿಸುವಂತೆ ಒತ್ತಾಯ ಮಾಡಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆಯಿಲ್ಲ, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೂಡಲೇ ಕೊಲೆ ಆರೋಪಿ ಫಯಾಜ್ ನನ್ನು ಎನ್ ಕೌಂಟರ್ ಮಾಡುವಂತೆ ಆಗ್ರಹ ಮಾಡಿದ್ದಾರೆ.