ಗದಗ: ವಾಲ್ಮೀಕಿ ನಿಗಮದಲ್ಲಿ ಸರಕಾರಿ ಹಣದ ವರ್ಗಾವಣೆಯ ಗೋಲ್ಮಾಲ್ ವಿರೋಧಿಸಿ ಹಾಗೂ ಅನ್ಯಾಯಕ್ಕೊಳಗಾದ ಎಸ್. ಟಿ. ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಗದಗ ಜಿಲ್ಲಾಡಳಿತ ಭವನದ ಎದುರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು. ಸಿಎಂ ಸಿಧ್ಧರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ, ಸಚಿವ ಎಚ್ ಕೆ ಪಾಟೀಲ್, ಮಾಜಿ ಸಚಿವ ನಾಗೇಂದ್ರ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಭವನದ ಗೇಟ್ ಏರಿ ನುಗ್ಗಲು ಯತ್ನ ಮಾಡಿದ್ದು, ಬಿಜೆಪಿ ಕಾರ್ಯಕರ್ತನ್ನ ತಡೆಯಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಎಸ್.ಟಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟರ, ಬಡವರ ಹಣವನ್ನು ನುಂಗಿ ನೀರು ಕುಡಿದಿದೆ. ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿ ಪ್ರತಿಭಟನೆ ನಡೆಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)