ಬೆಂಗಳೂರು: PSI ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಎ1 ಮಧು, ಎ2 ಹರೀಶ್ ಬಾಬು@ ಹರೀಶ್ಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್ಐ ಆಗಿದ್ದರು.
ಬೈಕ್ ಕಳ್ಳರನ್ನು ಹಿಡಿಯಲು ಬಂದಾಗ ನೆಲಮಂಗಲದಲ್ಲಿ ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ಡಿವೈಎಸ್ಪಿ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.ಕೋರ್ಟ್ಗೆ ನೆಲಮಂಗಲ ಟೌನ್ ಪೊಲೀಸರು 780 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಎ3 ಕೃಷ್ಣಪ್ಪ, ಎ4 ತಿಮ್ಮಕ್ಕ, ಎ5 ಹನುಮಂತ ರಾವ್ ಖುಲಾಸೆಗೊಳಿಸಲಾಗಿದೆ.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಡಾನ್ ಆಗುವ ಆಸೆಯಿಂದ ಪಿಎಸ್ಐಯನ್ನೇ ಕೊಂದುಬಿಟ್ಟರುವುದಾಗಿ ತನಿಖೆ ವೇಳೆ ಪೊಲೀಸರಿಗೆ ಎ1 ಅರೋಪಿ ಮಧು@ಗೋಣ್ಣೆ ಹೇಳಿಕೆ ನೀಡಿದ್ದ. ಹೀಗಾಗಿ ನೆಲಮಂಗಲ ಟೌನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 333, 307, 302, 397, 201, 212 , 75ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ತನಿಖಾಧಿಕಾರಿಯಾಗಿ ನಿವೃತ್ತ DYSP ರಾಜೇಂದ್ರ ಕುಮಾರ್, ಸರ್ಕಾರಿ ಅಭಿಯೋಜಕರು ಮೀನಾ ಕುಮಾರಿ, ಎಸ್ವ್ಹಿ ಭಟ್ (ನಿವೃತ್ತ)ವಾದ ಮಂಡಿಸಿದ್ದಾರೆ.