ಎಲ್ಲರ ಅಚ್ಚುಮೆಚ್ಚು ಬಾಂಬೆ ಮಿಠಾಯಿಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ತಮಿಳ್ಸಾಯಿ ಸುಂದರರಾಜನ್ ಹೇಳಿದ್ದಾರೆ.
INDU19 vs AUSU19: ಫೈನಲ್ನಲ್ಲಿ ಭಾರತಕ್ಕೆ ಸೋಲು – ನಾಯಕ ಉದಯ್ ಸಹರಾನ್ ಹೇಳಿದ್ದೇನು!?
ಆದರೆ, ಆಹಾರ ಸುರಕ್ಷತಾ ಇಲಾಖೆಯಿಂದ ಗುಣಮಟ್ಟದ ಪ್ರಮಾಣ ಪತ್ರ ಪಡೆದ ಮಾರಾಟಗಾರರು ಕಾಟನ್ ಕ್ಯಾಂಡಿ ಮಾರಾಟ ಮುಂದುವರಿಸಬಹುದು. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್-ಬಿ’ ಎಂಬ ಹಾನಿಕಾರಕ ರಾಸಾಯನಿಕ ಅಂಶವನ್ನು ಪರೀಕ್ಷಿಸಿದಾಗ ಕಂಡುಬಂದಿದೆ. ಇದರ ಬೆನ್ನಲ್ಲೇ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಆಹಾರ ಸುರಕ್ಷತಾ ಪ್ರಮಾಣ ಪತ್ರ ಎಷ್ಟು ಬೇಗ ಸಿಗುತ್ತದೋ ಅಷ್ಟು ಬೇಗ ವ್ಯಾಪಾರ ಆರಂಭಿಸಬಹುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ