ಕೊಪ್ಪಳ:– ಜೂನಿಯರ್ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿರುವ ಸೀನಿಯರ್ ಸ್ಟೂಡೆಂಟ್ಸ್, ಕಟ್ಟಿಗೆ, ಬೆಲ್ಟ್ನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದಾರೆ.
Hubballi: ಲೇವಾದೇವಿಯಲ್ಲಿ ಗಂಗಾ ಸೊಸೈಟಿಯು ಯಶಸ್ವಿ; ಶಾಸಕ ಮಹೇಶ್ ಟೆಂಗಿನಕಾಯಿ!
PU ವಿದ್ಯಾರ್ಥಿಗಳು 60ಕ್ಕೂ ಅಧಿಕ ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಟ್ಟಿಗೆ, ಬೆಲ್ಟ್ನಿಂದ ಹಲ್ಲೆ ನಡೆಸಿದ್ದು ಕೆಲವರಿಗೆ ಮರ್ಮಾಂಗಕ್ಕೆ ಒದ್ದು ವಿಕೃತಿ ಮರೆದಿದ್ದಾರೆ ಎನ್ನಲಾಗುತ್ತಿದೆ.
ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಪಾಲಕರಿಗೆ, ಶಿಕ್ಷಕರಿಗೆ ಹೇಳಿದ್ರೆ ನಿಮ್ಮನ್ನು ಸುಮ್ಮನೆ ಬಿಡೋದಿಲ್ಲಾ ಅಂತ ಬೆದರಿಕೆ ಕೂಡ ಹಾಕಿದ್ದಾರೆ. ಹಲ್ಲೆಯಿಂದ ನೊಂದ ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗೆ ಈ ವಿಚಾರ ಹೇಳಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟೇ ಅಲ್ಲ ಪ್ರಾಂಶುಪಾಲರ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ.
ಪಿಯು ವಿದ್ಯಾರ್ಥಿಗಳ ಪುಂಡಾಟಕ್ಕೆ ಕಡಿವಾಣ ಹಾಕಿಲ್ಲ. ಹೀಗಾಗಿ ಪ್ರಾಂಶುಪಾಲರು, ಸಿಬ್ಬಂದಿಯನ್ನು ಬದಲಾಯಿಸುವಂತೆ ಹಾಗೂ ಹಲ್ಲೆ ನಡೆಸಿರುವ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕುವಂತೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.