ಶಿವಮೊಗ್ಗ:– ಪದವೀಧರ ಕ್ಷೇತ್ರದಿಂದ ರಘುಪತಿ ಭಟ್ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ
ಈಶ್ವರಪ್ಪ ಅವರು, ಜೂನ್ 3 ರಂದು ವಿಧಾನ ಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ಬಂಡಾಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ಅವರಿಗೆ ಬೆಂಬಲ ಸೂಚಿಸಿ ಮತ ಯಾಚಿಸುತ್ತಿದ್ದಾರೆ.
ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ.. ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ – ಪರಮೇಶ್ವರ್!
ಪಕ್ಷದ ವ್ಯವಹಾರಗಳಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ಏಕಸ್ವಾಮ್ಯ ಮೆರೆಯುತ್ತಿದ್ದು ಮೊದಲಿದ್ದ ಸಾಮೂಹಿಕ ನಾಯಕತ್ವ ಕಾಣೆಯಾಗಿದೆ ಎಂದರು. ಇದನ್ನೇ ಬದಲಾಯಿಸಬೇಕು ಎಂದು ತಾನು ಮತ್ತು ರಘುಪತಿ ಭಟ್ ಪಣತೊಟ್ಟಿರುವುದಾಗಿ ಹೇಳಿದ ಈಶ್ವರಪ್ಪ ಬ್ರಹ್ಮ ಅಡ್ಡಬಂದರೂ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ ಎಂದರು. ಹಿಂದೂತ್ವದಲ್ಲಿ ಶಿವಮೊಗ್ಗ ಜಿಲ್ಲೆಯು ದಕ್ಷಿಣ ಕನ್ನಡ, ಉಡುಪಿ ಮತ್ತಿ ಕೊಡಗು ಜಿಲ್ಲೆಗಳಿಗಿಂತ ಹಿಂದಿಲ್ಲ, ಹಿಂದೂತ್ವದಲ್ಲಿ ನಂಬಿಕೆಯಿರುವ ಮತ್ತು ಅದನ್ನು ಪ್ರತಿಪಾದಿಸುವ ಜನರ ಮನೆಮನೆಗೆ ಹೋಗಿ ಭಟ್ ಅವರಿಗೆ ಮತ ಯಾಚಿಸೋಣ ಎಂದು ಹೇಳಿಕೆ ನೀಡಿದ್ದಾರೆ.