ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ರಾಹುಲ್ ಗಾಂಧಿ ಅವರು ಶುಭ ಕೋರಿದರು. ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ ಮತ್ತು ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು! ಸೂರ್ಯಕುಮಾರ್ ಯಾದವ್ ಎಂತಹ ಅದ್ಭುತ ಕ್ಯಾಚ್ ಹಿಡಿದಿರಿ! ಈ ಗೆಲುವು ರೋಹಿತ್ ಶರ್ಮಾ ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಟೀಮ್ ಇಂಡಿಯಾ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನವನ್ನು ಕಳೆದುಕೊಳ್ಳಲಿದೆ. ಟೀಮ್ ಇಂಡಿಯಾ ನಮ್ಮ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದೆ.” ಎಂದು ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ನಿತ್ಯ ಈಜುವುದರಿಂದ ನಮ್ಮ ಆರೋಗ್ಯಕ್ಕೆ, ಫಿಟ್ನೆಸ್ಗೆ ಸಿಗಲಿದೆ ಹಲವು ಬೆನಿಫಿಟ್..!
ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತದ ಪರ ವಿರಾಟ್ ಕೊಹ್ಲಿ (76) ಆಕರ್ಷಕದ ಅರ್ಧಶತಕ ಬಾರಿಸಿದರೆ, ಅಕ್ಷರ್ ಪಟೇಲ್ 47 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು
ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ದಿಟ್ಟ ಹೋರಾಟವನ್ನೇ ನಡೆಸಿದ್ದರು. ಅದರಲ್ಲೂ 15 ಓವರ್ ತನಕ ಪಂದ್ಯವು ಸೌತ್ ಆಫ್ರಿಕಾ ಪರವಿತ್ತು. ಆದರೆ ಅಂತಿಮ ಹಂತದಲ್ಲಿ ಜಸ್ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು. ಈ ಮೂಲಕ ಭಾರತ ತಂಡವು 7 ರನ್ಗಳ ರೋಚಕ ಜಯ ಸಾಧಿಸಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)